ಕೊರೊನಾ ವಾರಿಯರ್ಸ್ ಮೇಲೆ ದೌರ್ಜನ್ಯ ಎಸಗಿದರೆ ಜೈಲು: ಶಾಸಕ ನಡಹಳ್ಳಿ

ಕೊರೊನಾ ವಾರಿಯರ್ಸ್ ಮೇಲೆ ದೌರ್ಜನ್ಯ ಎಸಗಿದರೆ ಜೈಲು: ಶಾಸಕ ನಡಹಳ್ಳಿ

ಮುದ್ದೇಬಿಹಾಳ : ಕೊರೊನಾ ವೈರಸ್ ತಡೆಗಟ್ಟಲು ಹೋರಾಡುತ್ತಿರುವ ಆಶಾ,ಆರೋಗ್ಯ ಹಾಗೂ ವೈದ್ಯರ ಮೇಲೆ ಮತಕ್ಷೇತ್ರದ ವ್ಯಾಪ್ತಿಯಲ್ಲಿ ದೌರ್ಜನ್ಯ ನಡೆಸುವವರ ಕೈಕಾಲು ಮುರಿದು ಜೈಲಿಗೆ ಹಾಕುವಂತೆ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಪಟ್ಟಣದ ಆರೋಗ್ಯ ಇಲಾಖೆಯ ಕಛೇರಿ ಆವರಣದಲ್ಲಿ ಆಶಾ, ಆರೋಗ್ಯ ಕಾರ್ಯಕರ್ತರು, 108 ಚಾಲಕರಿಗೆ ದಿನಸಿ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆಶಾ, ಆರೋಗ್ಯ ಕಾರ್ಯಕರ್ತರು ಕ್ವಾರಂಟೈನ್‍ಲ್ಲಿರುವವರ ಆರೋಗ್ಯ ವಿಚಾರಿಸಲು ಬಂದಾಗ ಸೌಜನ್ಯದಿಂದ ನಡೆದುಕೊಳ್ಳಬೇಕು. ಕೇಳುವ ಮಾಹಿತಿಯನ್ನು ಸರಿಯಾಗಿ ನೀಡಬೇಕು.  ಅತಿರೇಕದಿಂದ ನಡೆದುಕೊಂಡಲ್ಲಿ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಹೇಳಿದರು.

ಶಾಸಕರ ಪತ್ನಿ ಮಹಾದೇವಿ ಪಾಟೀಲ ನಡಹಳ್ಳಿ, ಸಿಪಿಐ ಆನಂದ ವಾಗ್ಮೋಡೆ, ಡಾ.ಸತೀಶ ತಿವಾರಿ, ಆಶಾ, ಆರೋಗ್ಯ, 108 ವಾಹನಗಳ ಚಾಲಕರು ಇದ್ದರು.

Related