ಭರ್ಜರಿ ಕಾರ್ಯಾಚರಣೆ

ಚಿಕ್ಕಬಳ್ಳಾಪುರ, ಫೆ. 12 :  ಅರಣ್ಯಾಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಾಂತರ ರೂ.ಮೌಲ್ಯದ ರಕ್ತಚಂದನವನ್ನು ವಶಪಡಿಸಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ಚದಲಪುರ ಗೇಟ್ ಬಳಿ ನಡೆದಿದೆ.
ಆಂದ್ರಪ್ರದೇಶದಿಂದ ಬೆಂಗಳೂರಿನತ್ತ ರಕ್ತಚಂದನ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆಗಿಳಿದ ಚಿಕ್ಕಬಳ್ಳಾಪುರ ಅರಣ್ಯಾಧಿಕಾರಿಗಳು, ನಗರದ ಹೊರವಲಯದ ಚದಲಪುರ ಗೇಟ್ನ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಶಂಕಿತ ಸ್ಕಾರ್ಪಿಯೋ ವಾಹನವನ್ನು ಅಡ್ಡಗಟ್ಟಿದಾಗ ವಾಹನವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.

Related