ಪ್ರತಿ ಕುಟುಂಬಕ್ಕೂ 10 ಕೆ.ಜಿ ಅಕ್ಕಿ ಭರವಸೆ!

ಪ್ರತಿ ಕುಟುಂಬಕ್ಕೂ 10 ಕೆ.ಜಿ ಅಕ್ಕಿ ಭರವಸೆ!

ಬೆಂಗಳೂರು : ರಾಜ್ಯದಲ್ಲಿ ಉಪ ಚುನಾವಣಾ ಕಾವು ಜೋರಾಗಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ರಾರಯಲಿ ನಡೆಸಿದ್ರು. ಅದ್ರಲ್ಲಿ ‘ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತೆ. ಆಗ ಪ್ರತಿ ಬಡ ಕುಟುಂಬದ ಪ್ರತಿ ಸದಸ್ಯನಿಗೂ 10 ಕೆ.ಜಿ. ಅಕ್ಕಿ ನೀಡುತ್ತೇವೆ’ ಎಂದು ಭರವಸೆ ನೀಡಿದರು.

‘ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆಯಲ್ಲಿ 7 ಕೆ.ಜಿ. ಅಕ್ಕಿ ನೀಡುತ್ತಿತ್ತು. ಇದೀಗ ಯಡಿಯೂರಪ್ಪ ಅವರು ಅದನ್ನು 5 ಕೆ.ಜಿ.ಗೆ ಇಳಿಸಿದ್ದಾರೆ. ಕಡಿಮೆ ಮಾಡದೆ ಹೆಚ್ಚಿಸಿದ್ದರೆ ಏನಾಗುತ್ತಿತ್ತು. ಅವರೇನು ಅವರ ಅಪ್ಪನ ಮನೆಯಿಂದ ಯೋಜನೆಗೆ ಹಣ ತಂದು ಕೊಡುತ್ತಿದ್ದಾರಾ? ನಾನೂ ನಮ್ಮ ಅಪ್ಪನ ಮನೆಯಿಂದ ಯೋಜನೆಗೆ ಹಣ ಕೊಟ್ಟಿರಲಿಲ್ಲ. ಮುಂದೆ ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಾಗ 10 ಕೆ.ಜಿ. ಅಕ್ಕಿ ನೀಡುತ್ತೇವೆ’ ಎಂದರು.

Related