ದೆಹಲಿ ಸಿಎಂ ಗೆ 15 ದಿನ ನ್ಯಾಯಾಂಗ ಬಂಧನ

ದೆಹಲಿ ಸಿಎಂ ಗೆ 15 ದಿನ ನ್ಯಾಯಾಂಗ ಬಂಧನ

ನವದೆಹಲಿ: ಕಳೆದ ಕೆಲವು ದಿನಗಳಿಂದ ನಿರ್ದೇಶನಾಲಯದ ಕಸ್ಟಯಲ್ಲದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿಬಾಯ್ ಅವರನ್ನು ಇಂದು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಹೌದು, ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಮವಾರ ದೆಹಲಿ ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅವಧಿ ಇಂದು ಮುಗಿದಿದ್ದು, ಆರೋಪಿಯನ್ನು ರೂಸ್ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಲಾಯಿತು. ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು, ಆರೋಪಿಯನ್ನು ಏಪ್ರಿಲ್ 15 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

 

Related