ಆರೋಪಿ ಬಂಧನ : 15 ಲಕ್ಷ ಮೌಲ್ಯದ ಆಭರಣ ವಶ

ಆರೋಪಿ ಬಂಧನ : 15 ಲಕ್ಷ ಮೌಲ್ಯದ ಆಭರಣ ವಶ

ಬೆಂಗಳೂರು : ಮನೆಗಳಲ್ಲಿ ಹಾಗೂ ದೇವಸ್ಥಾನದ ಜನಸಂದಣಿಯಲ್ಲಿ ಚಿನ್ನದ ಒಡವೆಗಳನ್ನು ಕಳ್ಳತನ ಮಾಡಿದ್ದ ಆರೋಪಿಯೊಬ್ಬನನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿ 15 ಲಕ್ಷ ರೂ. ಬೆಲೆಬಾಳುವ 300 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಆ. 3ರಂದು ಬೆಳಗ್ಗೆ 10 ಗಂಟೆ ಸುಮಾರಿನಲ್ಲಿ ಅಣ್ಣಮ್ಮ ದೇವಿ ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯ ಬ್ಯಾಗ್ನಲ್ಲಿದ್ದ ಚಿನ್ನದ ಒಡವೆಗಳನ್ನು ಕಳವು ಮಾಡಿಕೊಂಡು ಹೋಗಿದ್ದ ಬಗ್ಗೆ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್ಪೆಕ್ಟರ್ ಶಿವಸ್ವಾಮಿ ಹಾಗೂ ಸಿಬ್ಬಂದಿ ಆರೋಪಿ ಪತ್ತೆಗಾಗಿ ಶೋಧ ನಡೆಸಿ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.

Related