2 ಕೋಟಿ ರೂ. ಹಣ ವಾಪಾಸ್ ನೀಡಿಲ್ಲ

2 ಕೋಟಿ ರೂ. ಹಣ ವಾಪಾಸ್ ನೀಡಿಲ್ಲ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು ಭಾನುವಾರ ಏಪ್ರಿಲ್ 21ರಂದು ಬೆಂಗಳೂರಿ ನಗರದಲ್ಲಿ ದಾಖಲೆ ಇಲ್ಲದ ಸಾಗಿಸುತ್ತಿದ್ದ ಸುಮಾರು 2 ಕೋಟಿ ನಗದು ಚುನಾವಣೆಯ ಅಧಿಕಾರಿಗಳ ವಶಪಡಿಸಿಕೊಂಡಿದ್ದು, ದಾಖಲೆಯಿಲ್ಲದೆ ಸಾಗಿಸುತ್ತಿದ್ದ 2 ಕೋಟಿ ರೂಪಾಯಿ ನಗದು ಬಿಜೆಪಿ ಪಕ್ಷದ್ದು ಎಂಬ ಮಾಹಿತಿ ಹಾರ ಬಿದ್ದಿದ್ದು ಈ ಹಣವನ್ನು ಹಿಂತಿರುಗಿಸಲು ಸಾಧ್ಯವಿಲ್ಲವೆಂದು ಬೆಂಗಳೂರು ನಗರ ಜಿಲ್ಲೆ ಎಮ್​ಸಿಸಿ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಸ್ಪಷ್ಟನೆ ನೀಡಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಈ ಹಣವು ರಾಜ್ಯ ಬಿಜೆಪಿ ಪಕ್ಷದ ಕಚೇರಿಗೆ ಸಂಬಂಧಿಸಿದ್ದು ಎಂದು ತಿಳಿದು ಬಂದ ಹಿನ್ನಲೆ ಆದಾಯ ತೆರಿಗೆ ಇಲಾಖೆಯು ಬಿಜೆಪಿಯ ಪದಾಧಿಕಾರಿಗಳನ್ನು ಕರೆಸಿ ತನಿಖೆ ನಡೆಸಿದೆ. ಈ ವೇಳೆ ಹಣದ ಮೂಲವು ಸರಿಯಾಗಿರುವುದರಿಂದ ಐಟಿ ಕಾನೂನಿನ ಅಡಿಯಲ್ಲಿ ಯಾವುದೇ ಉಲ್ಲಂಘನೆಯಾಗಿಲ್ಲ ಎಂದು ತೀರ್ಮಾನಿಸಿದೆ. ಆದರೆ, ಇಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಪಕ್ಷದ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳು ರಾಜಕೀಯ ಚಟುವಟಿಕೆಗಳಿಗಾಗಿ ನೀಡಿದ 10 ಸಾವಿರಕ್ಕಿಂತ ಹೆಚ್ಚಿನ ಹಣವನ್ನು ಚೆಕ್ ಅಥವಾ ಆನ್‌ಲೈನ್ ಮೂಲಕ ಮಾಡಲಾಗುತ್ತದೆ.

ರಾಜಕೀಯ ಪಕ್ಷಗಳು ಭಾರೀ ಪ್ರಮಾಣದ ಹಣವನ್ನು ಕೊಂಡೊಯ್ಯದಂತೆ ಇಸಿಐ ಸಲಹೆ ನೀಡಿದೆ.  ಆದರೆ, ಈ ಹಣವನ್ನು ಚುನಾವಣೆಯಲ್ಲಿ ಪ್ರಚೋದನೆಗಳಿಗೆ ಬಳಸಬಹುದೆಂಬ ಶಂಕೆಯ ಆಧಾರದ ಮೇಲೆ ನ್ಯಾಯಾಲಯದ ಆದೇಶದ ನಂತರ ಇಂದು ಎಫ್‌ಐಆರ್ ದಾಖಲಿಸಲಾಗಿದ್ದು, ಇಸಿಐ ನಿರ್ದೇಶನಗಳು ಮತ್ತು ಐಪಿಸಿಯ ಸೆಕ್ಷನ್ 171 ಬಿ 171 ಸಿ 171 ಇ 171 ಎಫ್ ಮತ್ತು ಆರ್‌ಪಿ ಕಾಯ್ದೆಯ ಸೆಕ್ಷನ್ 123 ರ ಪ್ರಾಥಮಿಕ ಉಲ್ಲಂಘನೆಯ ಕಾರಣದಿಂದ ನಗದನ್ನು ಕರ್ನಾಟಕ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮತ್ತು ಪ್ರಸ್ತುತ ಅದು ತನಿಖೆಯಲ್ಲಿದೆ ಎಂದರು.

Related