ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ಹಣ ವಶಕ್ಕೆ..!

ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ಹಣ ವಶಕ್ಕೆ..!

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಎಲ್ಲಿಯೂ ಕೂಡ ನಟ ದರ್ಶನ್ ಅವರ ಹೆಸರು ಹೆಳೆದಂತೆ ಹಂತಕರಿಗೆ 30 ಲಕ್ಷ ನಗದು ನೀಡಲಾಗಿತ್ತು ಎಂದು ಇದೀಗ ತಿಳಿದು ಬಂದಿದೆ.

ಹಂತಕರಿಗೆ 30 ಲಕ್ಷ ನೀಡಬೇಕೆಂದಿದ್ದ ಹಣ ರೆಸ್ಟೋರೆಂಟ್ ಒಂದರಲ್ಲಿ ಪೊಲೀಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆರ್‌.ಆರ್‌.ನಗರದ ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ಈ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಗಳು ತಿಳಿಸಿವೆ.

ಪ್ರಕರಣದಲ್ಲಿ ಬಂಧಿತನಾಗಿರುವ ವಿನಯ್ ಮಾಲೀಕತ್ವದ ರೆಸ್ಟೋರೆಂಟ್‌ನಲ್ಲಿ ಪೊಲೀಸರು ಶೋಧ ನಡೆಸಿದ್ದು, ಈ ವೇಳೆ 30 ಲಕ್ಷ ಹಣ ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ. ಇದನ್ನೂ ಓದಿ: ಬಿಎಸ್‌ವೈಗೆ ಬಿಗ್‌ ರೀಲಿಫ್‌

ಈ ಹಣ ಕೊಲೆ ಆರೋಪ ಹೊರುವ ಯುವಕರಿಗೆ ನೀಡಲು ಇಟ್ಟಿದ್ದ ಹಣ ಎನ್ನಲಾಗಿದೆ. ಕೊಲೆ ನಾವೇ ಮಾಡಿದ್ದು ಎಂದು ಒಪ್ಪಿಕೊಂಡು ಬಂದಿದ್ದ ರಾಘವೇಂದ್ರ, ಕಾರ್ತಿಕ್, ನಿಖಿಲ್ ನಾಯಕ್, ಕೇಶವಮೂರ್ತಿಗೆ ತಲಾ 5 ಲಕ್ಷ ನೀಡಲು ಹಣ ಇಡಲಾಗಿತ್ತು.

ಹಲ್ಲೆ ಸಮಯದಲ್ಲಿ ಪವಿತ್ರಾ ಗೌಡ ಕಾಲಿಗೆ ರೇಣುಕಾಸ್ವಾಮಿಯನ್ನು ಬೀಳಿಸಿದ್ದ, ಡಿ ಗ್ಯಾಂಗ್ ಕ್ಷಮಾಪಣೆ ಕೇಳಿಸಿತ್ತು ಎನ್ನಲಾಗಿದೆ.

 

Related