ಸ್ಫೋಟದಲ್ಲಿ 5 ಮಂದಿ ಸಾವು, ಪರಿಹಾರ ಘೋಷಿಸಿದ ಸಿಎಂ

ಸ್ಫೋಟದಲ್ಲಿ 5 ಮಂದಿ ಸಾವು, ಪರಿಹಾರ ಘೋಷಿಸಿದ ಸಿಎಂ

ಶಿವಮೊಗ್ಗ : ಶಿವಮೊಗ್ಗದ 4 ಕಿಲೋ ಮೀಟರ್ ದೂರದಲ್ಲಿರುವ ಅಬ್ಬಲಗೆರೆ- ಹುಣಸೋಡು ನಡುವಿನ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಸ್ಫೋಟಕಗಳು ಸ್ಪೋಟಿಸಿದ್ದರಿಂದ 8 ಮಂದಿ ಬಿಹಾರ ಮೂಲದವರು ಮೃತಪಟ್ಟಿದ್ದು, ಮುಖ್ಯಮಂತ್ರಿಗಳು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದರು.

ಗುರುವಾರ ರಾತ್ರಿ ಈ ಸ್ಫೋಟ ಸಂಭವಿಸಿದ್ದು, ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೆಟ್ ಬಾಕ್ಸ್ಗಳು ಸ್ಪೋಟಗೊಂಡು ಈ ಅನಾಹುತ ಸಂಭವಿಸಿದೆ. ಘಟನೆಯಲ್ಲಿ 8 ಮಂದಿ ಬಿಹಾರಿ ಕಾರ್ಮಿಕರು ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.

ಅಲ್ಲದೇ ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಗಣಿಗಾರಿಕೆ ತಜ್ಞರ ತಂಡ ತೆರಳಿದ್ದು, ಅವರಿಂದ ವರದಿ ಬಂದ ನಂತರ ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ, ಕ್ರಷರ್ ಗಳ ಕುರಿತು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

Related