ರೈತನ ಕುಟುಂಬಕ್ಕೆ 5 ಲಕ್ಷ ರೂ. ಚೆಕ್

ರೈತನ ಕುಟುಂಬಕ್ಕೆ 5 ಲಕ್ಷ ರೂ. ಚೆಕ್

ಹಾವೇರಿ : ಜಿಲ್ಲೆಯಲ್ಲಿ ನದಿಯಲ್ಲಿ  ಪ್ರವಾಹಕ್ಕೆ ಕೊಚ್ಚಿ ಹೋಗಿ ಮೃತಪಟ್ಟಿದ್ದ ಹಾನಗಲ್ಲ ತಾಲೂಕಿನ ಇನಾಂಲಕಮಾಪುರ ಗ್ರಾಮದ ರೈತ ಚಂದ್ರಪ್ಪ ದಳವಾಯಿ ಕುಟುಂಬದ ಸದಸ್ಯರಿಗೆ ಸರ್ಕಾರದಿಂದ ಮಂಜೂರಾದ 5 ಲಕ್ಷ ರೂ. ಪರಿಹಾರ ಚೆಕ್ ಅನ್ನು ಸಂಸದ ಶಿವಕುಮಾರ ಉದಾಸಿ ಅವರು ವಿತರಿಸಿ, ಸಾಂತ್ವನ ಹೇಳಿದರು.

ಪ್ರಕೃತಿ ವಿಕೋಪ ನಿಧಿಯಿಂದ 4 ಲಕ್ಷ ರೂ. ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಲಕ್ಷ ರೂ. ಸೇರಿ ಒಟ್ಟು 5 ಲಕ್ಷ ರೂ. ಪರಿಹಾರದ ಚೆಕ್‌ನ್ನು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ಉಪಸ್ಥಿತಿಯಲ್ಲಿ ವಿತರಿಸಲಾಯಿತು.

Related