ಚನ್ನಪಟ್ಟಣ : ಮೇಕೆದಾಟು, ಎತ್ತಿನಹೊಳೆ ಸೇರಿದಂತೆ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಲು ಸದ್ಯದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೋಮವಾರ ವರದಿಗಾರರಿಗೆ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಸೇರಿದಂತೆ ನೀರಾವರಿ ಯೋಜನೆ ಬಗ್ಗೆ ಸರ್ಕಾರದ ಹೇಳಿಕೆ ಘೋಷಣೆಯಾಗಿಯೇ ಉಳಿದಿದೆ. ಎತ್ತಿನಹೊಳೆ ಯೋಜನೆ ವಿಳಂಬವಾಗುತ್ತಿದ್ದು, ಯೋಜನಾ ವೆಚ್ಚ 23 ಸಾವಿರ ಕೋಟಿ ರೂ. ಗೆ ಏರಿಕೆಯಾಗಿದೆ. ಇದೇ ಮುಂದುವರೆದರೆ 50 ಸಾವಿರ ಕೋಟಿ ರೂ. ಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೆಚ್.ಡಿ.ಕೆ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಕಾಲಹರಣ ಮಾಡದೇ ಉತ್ತರ ರ್ನಾಟಕ, ದಕ್ಷಿಣ ಕರ್ನಾಟಕ, ಭಾಗದ ಎಲ್ಲಾ ನೀರಾವರಿ ಯೋಜನೆಗಳನ್ನು ತ್ವರಿತ ಅನುಷ್ಠಾನಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಮನವಿ ನೀಡಲು ಹೆಚ್.ಡಿ.ಕೆ ಮುಂದಾಗಿದ್ದಾರೆ.