ದೇವನಹಳ್ಳಿ: ವಿಜಯಪುರ ಪಟ್ಟಣದ ಬಹುತೇಕ ರಸ್ತೆಗಳು ಗುಂಡಿಗಳಿಂದ ತುಂಬಿದ್ದು, ಪ್ರತಿನಿತ್ಯ ನೂರಾರು ವಾಹನ ಸವಾರರು ಕಿರಿಕಿರಿ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ ಎಂದು ಮಂಗಳವಾರ ತಿಳಿದು ಬಂದಿದೆ.
ಕೋಲಾರ ಮುಖ್ಯರಸ್ತೆಗೆ ಹೋಗುವ ಮಾರ್ಗದಲ್ಲಿ ಹಯ್ಯದ್ ಫಂಕ್ಷನ್ ಹಾಲ್ ಎದುರು ಕಳಪೆ ರಸ್ತೆಯ ಕಾಮಗಾರಿಯಿಂದ ರಸ್ತೆಯು ಗುಂಡಿಗಳು ಕಿತ್ತು ಹೋಗಿ ,ಹಲವು ಬಾರಿ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡ ಘಟನೆಗಳು ನಡೆದಿದೆ. ಸಂಚರಿಸುವ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದ್ದು, ದುರಸ್ಥೀಕರಣ ಮಾಡುವಂತೆ ಸ್ಥಳೀಯರು ಆಗ್ರಹಿಸಿದರು. ಮನವಿಗೆ ಸ್ಪಂದಿಸದ ಅಧಿಕಾರಿಗಳು ಹಾಳಾದ ರಸ್ತೆ ದುರಸ್ಥಿಗೊಳಿಸುವಂತೆ ಸ್ಥಳೀಯರು ಹಲವು ಬಾರಿ ಪುರಸಭೆಗೆ ಮನವಿ ಮಾಡಿದರು. ಇದು ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಬರುತ್ತದೆ ಎಂದು ಹೇಳುತ್ತಾರೆ. ಆದರೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮಾತ್ರ ರಸ್ತೆಗಳನ್ನು ದುರಸ್ಥಿಗೊಳಿಸುವ ಗೋಜಿಗೆ ಮುಂದಾಗಿಲ್ಲ, ಕನಿಷ್ಟ ಪಕ್ಷ ವಾಹನಸವಾರರಿಗೆ ಅನುಕೂಲ ಮಾಡಿಕೊಡಬೇಕು ಎನ್ನುವುದು ಸಾರ್ವಜನಿಕರ ಬೇಡಿಕೆಯಾಗಿದೆ ಎಂದು ಹೇಳಿದರು.