ವ್ಯಕ್ತಿಯ ಮೇಲೆ ಕರಡಿ ದಾಳಿ

ವ್ಯಕ್ತಿಯ ಮೇಲೆ ಕರಡಿ ದಾಳಿ

ಮುಂಡಗೋಡ : ತಾಲೂಕಿನಲ್ಲಿ ಕರಡಿ ದಾಳಿಗೆ ವ್ಯಕ್ತಿಯೋರ್ವ ತೀವ್ರ ಗಾಯಗೊಂಡ ಘಟನೆ ತಾಲೂಕಿನ ನ್ಯಾಸರ್ಗಿ ಡ್ಯಾಂ ಬಳಿಯ ಅರಣ್ಯ ಪ್ರದೇಶದಲ್ಲಿ ಭಾನುವಾರ ನಡೆದಿದೆ.

ನ್ಯಾಸರ್ಗಿ ಗೌಳಿದಡ್ಡಿ ಗ್ರಾಮದ ರಾಮು ಎಡಿಗೆ ಎಂಬ ವ್ಯಕ್ತಿಯೇ ಕರಡಿಗೆ ದಾಳಿಗೊಳಗಾದವರು. ಎಂದಿನಂತೆ ದನ ಮೇಯಿಸಲು ಅರಣ್ಯ ಪ್ರದೇಶಕ್ಕೆ ಹೋದಾಗ ಕರಡಿ ಮರಿಯೊಂದು ಏಕಾಏಕಿ ದಾಳಿ ನಡೆಸಿ ಕೈ, ಕಾಲು ಹಾಗೂ ತಲೆಯ ಭಾಗಕ್ಕೆ ಕಚ್ಚಿ ಗಾಯಗೊಳಿಸಿದೆ.

ಮುಂಡಗೋಡ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಲಾಗಿದೆ.

Related