ರಿಲ್ಸ್ ಜೀವಕ್ಕೆ ತಂದ ಆಪತ್ತು

  • In State
  • July 24, 2023
  • 165 Views
ರಿಲ್ಸ್ ಜೀವಕ್ಕೆ ತಂದ ಆಪತ್ತು

ಉಡುಪಿ: ಕರ್ನಾಟಕದಾದ್ಯಂತ ಕಳೆದ ಒಂದು ವಾರದಿಂದ ಹಲವಾರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಹಳ್ಳಕೊಳ್ಳ ನದಿಗಳು ತುಂಬಿ ಹರಿಯುತ್ತಿದೆ.

ಮೈತುಂಬಿ ಹರಿಯುತ್ತಿರುವ ನದಿ ಸಾಗರಗಳನ್ನು ನೋಡಿಲು ಜನಸಾಗರ ಹರಿದು ಬರುತ್ತಿದೆ. ಇನ್ನು ನದಿಯ ಬಳಿ ಹೋಗಿ ಯುವಕನೊಬ್ಬ ರಿಲ್ಸ್ ಮಾಡಲು ಹೋಗಿ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾನೆ

ಹೌದು, ರೀಲ್ಸ್ ಮಾಡಲು ಹೋಗಿ ಜಾರಿ ಜಲಪಾತಕ್ಕೆ ಬಿದ್ದು ಯುವಕ ಮೃತಪಟ್ಟಿದ್ದಾನೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿ ಇರುವ ಅರಶಿನಗುಂಡಿ ಜಲಪಾತದಲ್ಲಿ ಈ ಘಟನೆ ನಡೆದಿದೆ.

ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದಾಗ ಈ ದುರಂತ ನಡೆದಿದ್ದು, ಯುವಕ ಜಲಪಾತದಲ್ಲಿ ಬೀಳುತ್ತಿರುವ ದ್ರಶ್ಯ ಮತ್ತೊರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ. ಇನ್ನು ಯುವಕನ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸುತ್ತಿದ್ದು, ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related