ಕಾಫಿ ನಾಡಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಭರ್ಜರಿ ಸ್ವಾಗತ

ಕಾಫಿ ನಾಡಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಭರ್ಜರಿ ಸ್ವಾಗತ

ಚಿಕ್ಕಮಂಗಳೂರು: ಕರ್ನಾಟಕ ರಾಜ್ಯದ ಬಿಜೆಪಿಯ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಇಂದು ಕಾಫಿ ನಾಡು ಚಿಕ್ಕಮಂಗಳೂರಿಗೆ ಪ್ರವಾಸ ಕೈಗೊಂಡಿದ್ದಾರೆ.

ಇನ್ನು ಪ್ರವಾಸದ ಹಿನ್ನಲೆಯಲ್ಲಿ ಬೃಹತ್ ಬೈಕ್ ರಾಲಿ ಹಾಗೂ ರೋಡ್ ಶೋ ಮೂಲಕ ಪಕ್ಷದ ಕಾರ್ಯಕರ್ತರು ಪ್ರೀತಿಪೂರ್ವಕವಾಗಿ ಬಿಜೆಪಿ ರಾಜಾದ್ಯಕ್ಷರಾದ ಬಿ ವೈ ವಿಜಯೆಂದ್ರ ಯಡಿಯೂರಪ್ಪ ನವರಿಗೆ ಸ್ವಾಗತಿಸಿದರು.

ಹಿಂದುತ್ವದ ಭದ್ರ ನೆಲೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಸಂಘಟನೆಗೊಂಡಿದ್ದ ಕಾರ್ಯಕರ್ತರ ಜಯಘೋಷ ಲೋಕಸಮರದ ಪ್ರಚಂಡ ಗೆಲುವಿಗೆ ರಣಕಹಳೆ ಮೊಳಗಿಸಿದಂತಿತ್ತು.

ಈ ಸಂದರ್ಭದಲ್ಲಿ ವಿರೋಧ ಪಕ್ಷ ನಾಯಕರಾದ ಆರ್ ಅಶೋಕ್, ಮಾಜಿ ಶಾಸಕ ಸಿಟಿ ರವಿ, ನಿಕಟ ಪೂರ್ವ ಜಿಲ್ಲಾಧ್ಯಕ್ಷರು ಹಾಗೂ ನೂತನ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್ ಸಿ ಕಲ್ಮರುಡಪ್ಪ, ನೂತನ ಜಿಲ್ಲಾಧ್ಯಕ್ಷರಾದ ಶ್ರೀ ದೇವರಾಜ ಶೆಟ್ಟಿ, ವಿಭಾಗ ಪ್ರಭಾರಿಗಳಾದ ಗಿರೀಶ್ ಪಟೇಲ್, ವಿಧಾನಪರಿಷತ್ ಸದಸ್ಯರಾದ ಎಂ. ಕೆ ಪ್ರಾಣೇಶ್, ಮಾಜಿ ಸಚಿವರುಗಳಾದ ಶ್ರೀ ಪ್ರಮೋದ್ ಮಧ್ವರಾಜ್, ಶಾಸಕರು ಹಾಗೂ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಹರೀಶ್ ಪೂಂಜಾ, ರಾಜ್ಯ ಕಾರ್ಯದರ್ಶಿ ಶ್ರೀ ಶರಣು ತಳ್ಳೀಕೆರೆ, ಮಾಜಿ ಶಾಸಕರುಗಳಾದ ಶ್ರೀ ಡಿ ಎಸ್ ಸುರೇಶ್, ಶ್ರೀ ಬೆಳ್ಳಿ ಪ್ರಕಾಶ್, ಕಾಫಿ ಬೋರ್ಡ್ ಅಧ್ಯಕ್ಷರಾದ ಶ್ರೀ ದಿನೇಶ್ ದೇವವೃಂದ ಅವರು ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related