ಪತಿಗೆ ಕೊಂದ ಕಿರಾತಕಿ

ಪತಿಗೆ ಕೊಂದ ಕಿರಾತಕಿ

ದಾವಣಗೆರೆ : ಆಹಾರದಲ್ಲಿ ನಿದ್ದೆ ಮಾತ್ರೆ ಬೆರೆಸಿ, ಮೂವರ ಜೊತೆ ಸೇರಿ ಪತಿಯ ಕೊಲೆ ಮಾಡಿದ ಪತ್ನಿಗೆ ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.

ಜಗಳೂರು ಪಟ್ಟಣದ ಹೊರವಲಯದ ಬಿದರಕೆರೆ ರಸ್ತೆಯಲ್ಲಿ ನಡೆದ ಎಗ್ ರೈಸ್ ವ್ಯಾಪಾರಿ ಬಸವರಾಜಪ್ಪ ಕೊಲೆ ಪ್ರಕರಣವನ್ನು 24 ಗಂಟೆಯೊಳಗೆ ಬೇಧಿಸಿರುವ ಪೊಲೀಸರು, ಈ ನಾಲ್ವರು ಆರೋಪಿಗಳನ್ನು ನಿನ್ನೆ ಬಂಧಿಸಿದ್ದಾರೆ.

ಕೊಲೆ ಪ್ರಕರಣ ಸಂಬಂಧ ಬಸವರಾಜಪ್ಪನ ಪತ್ನಿ ಭಾಗ್ಯಮ್ಮ, ಜಗಳೂರು ತಾಲ್ಲೂಕಿನ ಗುಡ್ಡದ ನಿಂಗನಹಳ್ಳಿ ಗ್ರಾಮದ ಅಂಜಿನಪ್ಪ, ಚೌಡಪ್ಪ, ಆಟೊ ಚಾಲಕ ಮಾರುತಿ ಅವರನ್ನು ಬಂಧಿಸಲಾಗಿದೆ.

ಬಸವರಾಜಪ್ಪ ಅವರಿಗೆ ಬೇರೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಇತ್ತು. ಇದನ್ನು ಪತ್ನಿ ಭಾಗ್ಯಮ್ಮ ಪ್ರಶ್ನಿಸುತ್ತಿದ್ದರು. ಇದರಿಂದ ಪ್ರತಿದಿನ ಗಲಾಟೆ ನಡೆಯುತ್ತಿತ್ತು. ಇದರಿಂದ ಭಾಗ್ಯಮ್ಮ ಪತಿಯ ಕೊಲೆಗೆ ಯೋಜಿಸಿದ್ದರು. ಆಟೊ ಚಾಲಕ ಮಾರುತಿ, ಜೌಡಪ್ಪರಿಗೆ ಪತಿಯ ಕೊಲೆ ಮಾಡಿದರೆ 1 ಲಕ್ಷ ರೂಪಾಯಿ ಕೊಡುವುದಾಗಿ ಹೇಳಿದರು. ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

 

Related