ಸಿಎಂಗೆ ಫ್ರೀ ಟಿಕೆಟ್ ಹಾರ ಹಾಕಿದ ವಿದ್ಯಾರ್ಥಿನಿ

ಸಿಎಂಗೆ ಫ್ರೀ ಟಿಕೆಟ್ ಹಾರ ಹಾಕಿದ ವಿದ್ಯಾರ್ಥಿನಿ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ 5 ಗ್ಯಾರಂಟಿಗಳನ್ನು ನೀಡಿದ್ದು, 5 ಗ್ಯಾರಂಟಿಗಳಲ್ಲಿ ಮಹತ್ವದ ಗ್ಯಾರಂಟಿಯಾದ ಶಕ್ತಿ ಯೋಜನೆಯಿಂದ ರಾಜ್ಯದಲ್ಲಿರುವ ಮಹಿಳೆಯರಿಗೆ ಇದೊಂದು ವರದಾನ ಯೋಜನೆಯಾಗಿ ಹೊರಹೊಮ್ಮಿದೆ.  ಇದರಿಂದ ಶಕ್ತಿ ಯೋಜನೆಯಿಂದ ರಾಜದಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು.

ಇನ್ನು ಉಚಿತವಾಗಿ ಪ್ರಯಾಣಿಸಿದ ಟಿಕೆಟ್ ಗಳನ್ನು ಅರ್ಸೀಕೆರೆಯಲ್ಲಿ ಕಾನೂನು ವಿದ್ಯಾರ್ಥಿನಿಯೊಬ್ಬರು ವಿಶೇಷವಾಗಿ ತಾನು ಪ್ರಯಾಣಿಸಿದ ಟಿಕೆಟ್ಗಳನ್ನು ಸಂಗ್ರಹಿಸಿ ಹೂವಿನ ಹಾರದಂತೆ ಪೋಣಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಕಿದ್ದಾಳೆ.

ಶಕ್ತಿ ಯೋಜನೆಯಿಂದ ರಾಜ್ಯದಲ್ಲಿರುವ ಎಷ್ಟೋ ಬಡ ಮಹಿಳೆಯರಿಗೆ ಮತ್ತು ಬಡ ವಿದ್ಯಾರ್ಥಿಗಳಿಗೆ ಸಹಾಯವಾಗಿದೆ ಎಂದು ಸಿದ್ದರಾಮಯ್ಯ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಹಾಸನ ಜಿಲ್ಲೆಯ ಅರಸೀಕೆರೆ ಪಟ್ಟಣದಲ್ಲಿ ಸೋಮವಾರ ಚುನಾವಣಾ ಪ್ರಚಾರದಕ್ಕೆಂದು ಸಿಎಂ ಸಿದ್ದರಾಮಯ್ಯ ಅವರು ತೆರಳಿದ್ದ ವೇಳೆ ಅರಸೀಕೆರೆಯ ಪ್ರಥಮ ವರ್ಷದ ಕಾನೂನು ವಿದ್ಯಾರ್ಥಿನಿ ಎಂ.ಎ.ಜಯಶ್ರೀ ಈ ಹಾರವನ್ನು ಸಿಎಂಗೆ ಹಾಕಿದ್ದಾಳೆ. ವಿನೂತನ ಶೈಲಿಯಲ್ಲಿ ಧನ್ಯತೆ ತೋರಿದ್ದು ಸದ್ಯ ಈ ಫ್ರೀ ಬಸ್ ಟಿಕೆಟ್​ ಹಾರ ಸದ್ಯ ಎಲ್ಲೆಡೆ ವೈರಲ್​​ ಆಗಿದೆ.

 

Related