ಬೆಂಗಳೂರು : ಅಮೃತ ನಗರದ ದೇವೇಂದ್ರಪ್ಪ ಮನೆ ಹಾಗೂ ಹಲಸೂರು ಗುಪ್ತ ಲೇಔಟ್ನಲ್ಲಿ ದೇವೇಂದ್ರಪ್ಪ ಆಪ್ತ ಶ್ರೀನಿವಾಸ್ ಎಂಬುವರ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ಶೋಧಕಾರ್ಯ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಸಿರುವ ನಿಖರ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ಬಿಬಿಎಂಪಿ ಸಹಾಯಕ ಅಭಿಯಂತ ದೇವೇಂದ್ರಪ್ಪ ಹಾಗೂ ಆಪ್ತ ಶ್ರೀನಿವಾಸ್ ಎಂಬುವರ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿವಾಸದಲ್ಲಿರುವ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.