ಕಲ್ಯಾಣ ಇಲಾಖೆ ಅಧಿಕಾರಿಯ ಮನೆ ಮೇಲೆ ಎಸಿಬಿ ದಾಳಿ

ಕಲ್ಯಾಣ ಇಲಾಖೆ ಅಧಿಕಾರಿಯ ಮನೆ ಮೇಲೆ ಎಸಿಬಿ ದಾಳಿ

ಶಿವಮೊಗ್ಗ : ಇಂದು ಇಲ್ಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಜಿ.ಜಿ.ಸುರೇಶ್ ಮನೆ ಮೇಲೆ ಎಸಿಬಿ ದಾಳಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಜಿ.ಜಿ.ಸುರೇಶ್ ಅವರಿಗೆ ಸಂಬಂಧಿಸಿದ ಮಲ್ಲೇಶ್ವರನಗರದ ಅನ್ನಪೂರ್ಣೇಶ್ವರಿ ನಿಲಯ ಹಾಗೂ ಗೋಪಾಳದ ಮೇಲೆ ದಾಳಿ ಮಾಡಲಾಗಿದೆ. ಭದ್ರಾವತಿ ತಾಲೂಕಿನ ಹುಣಸೆಕಟ್ಟೆ ತೋಟದ ಮನೆ ಮೇಲೆ ದಾಳಿ ನಡೆಸಲಾಗಿದೆ.

ಅಕ್ರಮ ಆಸ್ತಿ ಗಳಿಕೆ ಸಂಬಂಧ  ಮಾಹಿತಿ ಪಡೆದ ಎಸಿಬಿ ತಂಡ ದಾಳಿ ನಡೆಸಿದ್ದು, ಶಿವಮೊಗ್ಗ ಎಸಿಬಿ ಡಿಎಸ್ ಪಿ ಜೆ.ಲೋಕೇಶ್ ಹಾಗೂ ದಾವಣಗೆರೆ ಡಿಎಸ್ ಪಿ ಹೆಚ್.ಎಸ್.ಪರಮೇಶ್ವರ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

Related