ಬೆಂಗಳೂರು: ಚಳಿಗಾಲ ಬಂತೆಂದರೆ ಸಾಕು ಪ್ರತಿ ವರ್ಷವೂ ತುಮಕೂರು ಮತ್ತು ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತಗಳು ನಡೆಯುವುದು ಸರ್ವೆ ಸಾಮಾನ್ಯವಾಗಿ ಬಿಟ್ಟಿದೆ.
ಹೌದು, ಇಂದು ಬೆಳಗ್ಗೆ ತುಮಕೂರು ಮತ್ತು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತೊಣಚಿನಗುಪ್ಪೆ ಗ್ರಾಮದ ಬಳಿ 5 ಖಾಸಗಿ ಬಸ್ಗಳ ನಡುವೆ ಬೀಗರ ಅಪಘಾತವಾಗಿದ್ದು ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವೆಂದು ತಿಳಿದುಬಂದಿದೆ.
ಬೆಳಗಿನ ಜಾವ ದಟ್ಟವಾದ ಮಂಜು ಆವರಿಸಿತ್ತು. ರಸ್ತೆ ಕಾಣದೇ ಅಪಘಾತ ಸಂಭವಿಸಿರೋ ಸಾಧ್ಯತೆಗಳಿವೆ. ಅಪಘಾತದ ಬಳಿಕ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಟ್ರಾಫಿಕ್ ತಿಳಿಗೊಳಿಸುವಲ್ಲಿ ನಿರತರಾಗಿದ್ದಾರೆ. ಕಳೆದ ಒಂದೂವರೆ ಗಂಟೆಯಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.