ಭೀಕರ ಅಪಘಾತ ಸ್ಥಳದಲ್ಲೇ ಮೂವರು ಸಾವು

  • In Crime
  • May 7, 2022
  • 316 Views

ಕನಕಪುರ ತಾಲ್ಲೂಕಿನ ಕೆಮ್ಮಾಳೆದೊಡ್ಡಿ ಬಳಿ ಶನಿವಾರ ಮುಂಜಾನೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಇನೋವಾ ಕಾರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಕ್ಷತಾ, ಅವರ ಆರು ತಿಂಗಳ ಮಗು ಸುಮಂತ್ ಹಾಗೂ ಕಾರ್ ಚಾಲಕ ಉಮೇಶ್ ಸಾವನ್ನಪ್ಪಿದವರು. ಅಪಘಾತದ ತೀವ್ರತೆಗೆ ಮಗುವಿನ ದೇಹ ಛಿದ್ರವಾಗಿದೆ. ಮತ್ತಿಬ್ಬರಿಗೆ ಗಾಯಗಳಾಗಿದ್ದು, ಗಾಯಗೊಂಡವರನ್ನ ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿ, ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಕಾರು ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಈ ಕುರಿತು ಸಾತನೂರು ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

Related