ಬಳ್ಳಾರಿ : ರಸ್ತೆಯಲ್ಲಿ ಅಪಘಾತದಲ್ಲಿ ಪತಿ-ಪತ್ನಿ ಇಬ್ಬರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಹೊಸಪೇಟೆಯ ಅನಂತಶಯನ ದೇವಸ್ಥಾನದ ರಸ್ತೆಯಲ್ಲಿ ನಡೆದಿದೆ.
ಹೊಸಪೇಟೆ ನಿವಾಸಿಗಳಾದ ರಾಜು ಹಾಗೂ ಪತ್ನಿ ಶಾಂತ ಮೃತ ದುರ್ದೈವಿಗಳು. ದಂಪತಿ ಟಿವಿಎಸ್ ಎಕ್ಸಲ್ನಲ್ಲಿ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದು ತೀವ್ರ ರಕ್ತಸ್ರಾವವಾಗಿ ದಂಪತಿ ಪ್ರಾಣಬಿಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಹೊಸಪೇಟೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.