ಯಾರದ್ದೇ ಕೈವಾಡವಿದ್ದರೂ ಮುಲಾಜಿಲ್ಲದೇ ಕ್ರಮ -ಸಿಎಂ

ಯಾರದ್ದೇ ಕೈವಾಡವಿದ್ದರೂ ಮುಲಾಜಿಲ್ಲದೇ ಕ್ರಮ -ಸಿಎಂ

ಬೆಂಗಳೂರು : ಶಿವಮೊಗ್ಗ ಸ್ಪೋಟಕ ಪ್ರಕರಣದಲ್ಲಿ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ. ಸಮಗ್ರ ತನಿಖೆಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಈಗಾಗಲೇ ಕಲ್ಲುಗಣಿಕಾರಿಗೆ ಮಾಲೀಕ ಸೇರಿ ಮೂವರನ್ನು ಬಂಧಿಸಲಾಗಿದೆ. ಮೃತಪಟ್ಟ ಐವರು ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಈ ವೇಳೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಳೆ ನಾನು ಶಿವಮೊಗ್ಗದಲ್ಲಿ ಸ್ಪೋಟಕ ನಡೆದಂತ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದೇನೆ. ಈಗಾಗಲೇ ಸಚಿವ ಮುರುಗೇಶ್ ನಿರಾಣಿ ಹಾಗೂ ಸಂಬಂಧಿಸಿದಂತ  ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಸ್ಥಳಕ್ಕೆ ತೆರಳಿ ಸಮಗ್ರ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು.

Related