ಬೆಂಗಳೂರು, ಜು 28 : ಕರ್ನಾಟಕದಲ್ಲಿ “ಪುಣ್ಯಕೋಟಿ ದತ್ತು ಯೋಜನೆ” ಮೂಲಕ ನಮ್ಮ ಗೋ-ಸಂಪತ್ತನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಒಂದು ಹೆಜ್ಜೆ ಮುಂದಿಟ್ಟಿದೆ. ಸರ್ಕಾರದ ಈ ಕಾರ್ಯಕ್ರಮದ ಅಡಿಯಲ್ಲಿ ನಮ್ಮ ಗೋವುಗಳನ್ನು ನೋಡಿಕೊಳ್ಳಲು ಮತ್ತು ಗೋಶಾಲೆಗಳನ್ನು ನಿರ್ವಹಿಸುವುದಕ್ಕೆ ಸರ್ಕಾರದೊಂದಿಗೆ ಜನರೂ ಸಹ ಕೈಜೋಡಿಸಲು ಅವಕಾಶ ತೆರೆದುಕೊಳ್ಳುತ್ತದೆ.
ಪುಣ್ಯಕೋಟಿ ದತ್ತು ಯೋಜನೆ ಎಂಬ ಗೋವಿನ ಕಾರ್ಯಕ್ರಮಕ್ಕೆ ಜುಲೈ 28ರಂದು ಕರ್ನಾಟಕದ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಚಾಲನೆ ನೀಡಲಿದ್ದಾರೆ ಈ ಕಾರ್ಯಕ್ರಮ ಅಡಿಯಲ್ಲಿ ಗೋಶಾಲೆಗಳಲ್ಲಿನ ಹಸುಗಳನ್ನು ಖಾಸಗಿ ಮತ್ತು ಸಾರ್ವಜನಿಕ ಸಂಸ್ಥೆಗಳು ದತ್ತು ಪಡೆದುಕೊಳ್ಳುವುದಕ್ಕೆ ಪ್ರೋತ್ಸಾಹ ನೀಡುತ್ತದೆ. ಗೋಶಾಲೆಗಳಲ್ಲಿರುವ ಹಸುಗಳಿಗೆ ಉತ್ತಮ ಸೌಕರ್ಯ ಮತ್ತು ಸೌಲಭ್ಯ ಒದಗಿಸುವಂತೆ ಸಾರ್ವಜನಿಕರನ್ನು ಉತ್ತೇಜಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ.