ಕಾಂಗ್ರೆಸ್​ನವರು ಅಧಿಕಾರಕ್ಕೆ ಬಂದ ಮೇಲೆ ದರಿದ್ರ ಬಂದಿದೆ, ಅಶೋಕ್

ಕಾಂಗ್ರೆಸ್​ನವರು ಅಧಿಕಾರಕ್ಕೆ ಬಂದ ಮೇಲೆ ದರಿದ್ರ ಬಂದಿದೆ, ಅಶೋಕ್

ಬೆಂಗಳೂರು: ಜೈ ಶ್ರೀರಾಮ್ ಎಂದು ಕೂಗಿದವರ ವಿರುದ್ಧ ಕಾಂಗ್ರೆಸ್ ನವರಿಗೆ ಧಮ್ ಇದ್ದರೆ ಕೇಸ್ ಹಾಕಲಿ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ ಅಭ್ಯರ್ಥಿ ಡಿ.ಕೆ.ಸುರೇಶ್ ದೇಶದ್ರೋಹದ ಹೇಳಿಕೆ ಕೊಡುತ್ತಾರೆ. ಅಲ್ಪಸಂಖ್ಯಾತ ಮೂಲಭೂತವಾದಿಗಳಿಗೆ ಇದರಿಂದ ಹುರುಪು ಬಂದಿದೆ. ಹೀಗಾಗಿ ನಮ್ಮನ್ನ ಯಾರು ಕೇಳಲ್ಲ ಅಂತಾ ಈ ರೀತಿ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.

ನೀವು ಅವರನ್ನು ರಕ್ಷಣೆ ಮಾಡುವುದಕ್ಕೆ ಹೋಗುತ್ತೀರಾ? ಹುಚ್ಚಾಸ್ಪತ್ರೆಯಿಂದ ಬಂದವರು ಅಂತೇಳಿ ಕೇಸ್ ಮುಚ್ಚಿ ಹಾಕುತ್ತೀರಾ? ಮುಸ್ಲಿಂ ಮೂಲಭೂತವಾಗಿರುವ ಸರ್ಕಾರಕ್ಕೆ ಜನರು ಪಾಠ ಕಲಿಸುತ್ತಾರೆ. ಕಾಂಗ್ರೆಸ್​ನವರು ಅಧಿಕಾರಕ್ಕೆ ಬಂದ ಮೇಲೆ ದರಿದ್ರ ಬಂದು ಬಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Related