ಅಮಿತ್ ಶಾ ನನ್ನ ಜೀವ ತೆಗೆದರು: ವಿ. ಸೋಮಣ್ಣ

ಅಮಿತ್ ಶಾ ನನ್ನ ಜೀವ ತೆಗೆದರು: ವಿ. ಸೋಮಣ್ಣ

ತುಮಕೂರು: ತುಮಕೂರಿನಲ್ಲಿರುವ ಪ್ರಸಿದ್ಧ ಸಿದ್ದಗಂಗಾ ಮಠಕ್ಕೆ ಇಂದು ಮಾಜಿ ಮಾಜಿ ಸಚಿವ ವಿ ಸೋಮಣ್ಣ ಅವರು ಭೇಟಿ ನೀಡಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ವಿ ಸೋಮಣ್ಣ ಅವರು, ನಾನು ವಿಧಾನಸಭಾ ಚುನಾವಣೆಯಲ್ಲಿ ಸೋಲಲು ಅಮಿತ್  ಶಾ ಮತ್ತು ಮೋದಿಯವರೇ ಕಾರಣವೆಂದು ಬಹಿರಂಗವಾಗಿ ತಮ್ಮ ಬೇಸರವನ್ನು ಹೊರಹಾಕಿದ್ದಾರೆ.

ವಿ ಸೋಮಣ್ಣ ಅವರು ಸೋಲಿನ ಬೇಸರವನ್ನು ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಬಳಿ ಹಂಚಿಕೊಂಡಿದ್ದಾರೆ. “ಇಲ್ಲಿ ಬಿಟ್ಟು ಅಲ್ಲಿ ಸ್ಪರ್ಧೆ ಮಾಡಿದ್ದೇ ನನ್ನ ಮಹಾ ಅಪರಾಧವಾಯ್ತು. ಕೇಂದ್ರ ಗೃಹ ಅಮಿತ್ ಶಾ ನಮ್ಮ ಮನೆಯಲ್ಲಿ ಕುಳಿತುಕೊಂಡು ಜೀವ ತೆಗೆದರು. ಎರಡು ಗಂಟೆ ಮನೆಯಲ್ಲಿ ಕುಳಿತುಕೊಂಡಿದ್ದರು, ಆಗಲ್ಲ ಅಂತಾ ಹೇಳಿದ್ದೆ. ಪ್ರಧಾನಿ ಮೋದಿಯವರು ದೆಹಲಿಗೆ ಕರೆಸಿ ನೀನು ಸ್ಪರ್ಧೆ ಮಾಡು ಅಂದರು, ಏನ್ಮಾಡಲಿ” ಎಂದು ಬೇಸರ ವ್ಯಕ್ತಪಡಿಸಿದರು. ಈ ಮೂಲಕ ತಾವು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಕಾರಣವೇನು ಎಂಬುವುದರ ಹಿಂದಿನ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ.

 

Related