ಸ್ನೇಹಕ್ಕಾಗಿ ಬಿತ್ತು ಮತ್ತೊಂದು ಹೆಣ!

ಸ್ನೇಹಕ್ಕಾಗಿ ಬಿತ್ತು ಮತ್ತೊಂದು ಹೆಣ!

ನವದೆಹಲಿ : ಎರಡು ವರ್ಷಗಳ ಹಿಂದೆ ಮುಸ್ಲಿಂ ಹುಡುಗಿಯನ್ನು ಪ್ರೀತಿಸಿದ ಕಾರಣಕ್ಕೆ ಅಂಕಿತ್ ಸಕ್ಸೇನಾ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿತ್ತು.

ಆದರ್ಶ್ ನಗರದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಹುಡುಗಿಯನ್ನು ಪ್ರೀತಿಸಿದ್ದ 18 ವರ್ಷದ ವಿಶ್ವವಿದ್ಯಾಲಯದ ಅಹುಲ್ ರಜಪೂತ್ ಎಂಬಾತನನ್ನು ಐದು ಮಂದಿ ಮುಸ್ಲಿಂ ಯುವಕರು ಸೇರಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ರಾಹುಲ್ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿದ್ದಾನೆ.

ಮೊಹಮ್ಮದ್ ಅಫ್ರೋಲ್, ಮೊಹಮ್ಮದ್ ರಾಜ್ ಸೇರಿದಂತೆ ಐವರು ಹಲ್ಲೆ ಮಾಡುತ್ತಿರುವ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರ ಪ್ರಕಾರ, ಅಹುಲ್ ತನ್ನ ಮನೆಯ ಸಮೀಪ ಇರುವ ಯುವತಿಯ ಜತೆ ಸ್ನೇಹ ಬೆಳೆಸಿದ್ದ. ಇದಕ್ಕೆ ಯುವತಿಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು.

ಘಟನೆಯನ್ನು ಖಂಡಿಸಿರುವ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ 10 ಲಕ್ಷ ರೂಪಾಯಿ ಪರಿಹಾರವನ್ನು ಯುವಕನ ಕುಟುಂಬಕ್ಕೆ ಘೋಷಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

Related