ಬೆಂಗಳೂರು: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಒಂದಲ್ಲ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿ ಆಗುತ್ತಲೇ ಇರುತ್ತಾರೆ.
ಹೌದು, ಕಾಂಗ್ರೆಸ್ ನ ಹಿರಿಯ ಮಾಜಿ ಶಾಸಕ ಕೆ.ಎಸ್ ಈಶ್ವರಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಸಂಸದ ಡಿಕೆ ಶಿವಕುಮಾರ್ ಮತ್ತು ವಿನಯ್ ಕುಲಕರ್ಣಿ ಅವರಿಗೆ ಗುಂಡಿಕ್ಕಿ ಕೊಲ್ಲಬೇಕೆಂದು ಹೇಳಿಕೆ ನೀಡಿದ್ದ ಈಶ್ವರಪ್ಪ ಅವರ ವಿರುದ್ಧ ಈ ಹೇಳಿಕೆಗೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಾಗಿದೆ.
ಇನ್ನು ಆರ್ಆರ್ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಶಶಾಂಕ್ ಹಾಗೂ ಸಂಜಯ್ ಅವರು ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳುವಂತೆ ಆಗ್ರಹಿಸಿದರು. ಕೆಎಸ್ ಈಶ್ವರಪ್ಪ ಅವರ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ (ಫೆ.09) ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಇದೀಗ ದಾವಣಗೆರೆ ಪೊಲೀಸರು ಕೆಎಸ್ ಈಶ್ವರಪ್ಪ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೆ ಶಿವಮೊಗ್ಗದ ಮಲ್ಲೇಶ್ವರ ಬಡಾವಣೆಯಲ್ಲಿರುವ ಕೆಎಸ್ ಈಶ್ವರಪ್ಪ ಅವರ ನಿವಾಸಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.