ವಿನಯ ಕುಲಕರ್ಣಿ ಬಂಧನ ; ಸಿದ್ದು ಆರೋಪ

ವಿನಯ ಕುಲಕರ್ಣಿ ಬಂಧನ ; ಸಿದ್ದು ಆರೋಪ

ಬಾಗಲಕೋಟೆ : ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ ಬಿಜೆಪಿಯ ರಾಜಕೀಯ ಷಡ್ಯಂತ್ರದ ಕ್ರಮ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪುನರುಚ್ಚರಿಸಿದರು.

ಬಾದಾಮಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ತನಿಖೆ ಮುಗಿದು, ಚಾರ್ಜ್ ಶೀಟ್ ಹಾಕಿದ ಮೇಲೆ ಮತ್ತೆ ರಿ ಓಪನ್ ಮಾಡಿ, ಸಿಬಿಐಗೆ ಕೊಟ್ಟಿದ್ದು ರಾಜಕೀಯ ಪ್ರೇರಿತವಲ್ಲವಾ!? ಎಂದು ಪ್ರಶ್ನಿಸಿದರು.

ಈ ಪ್ರಕರಣದ ಮೂಲಕ ವಿನಯ ಕುಲಕರ್ಣಿ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ವಿರೋಧ ಪಕ್ಷದವರನ್ನು ಬಾಯಿ ಮುಚ್ಚಿಸಿದರೆ ತಮ್ಮ ಇಷ್ಟಬಂದ ಹಾಗೆ ಆಟ ಆಡಬಹುದು ಅನ್ನೋದು ಬಿಜೆಪಿಯವರ ವಿಚಾರ ಎಂದರು.
ನಾನೇ ಅಲ್ಲಿ ಕಣ್ಣಾರೆ ನೋಡಿರೋದು ಕಾಂಗ್ರೆಸ್ ಪರ ಜನರ ಒಲವು ಹೆಚ್ಚಿತ್ತು ಎಂದು ಹೇಳಿದರು. ಮೋದಿ ಅಲೆ ಎಲ್ಲಿದೆ, ಅಲೆನೂ ಇಲ್ಲ ಪಲೆನೂ ಇಲ್ಲ ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

Related