ಲಿಂಗಸುಗೂರು: ಕಳೆದ 5 ದಿನಗಳಿಂದ ಆಶಾ ಕಾರ್ಯಕರ್ತೆಯರು ಸೇವೆಯನ್ನು ಸ್ಥಗಿತಗೊಳಿಸಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಹೋರಾಟ ಮಾಡುತ್ತಿದ್ದಾರೆ. ಆದರೆ ದಪ್ಪ ಚರ್ಮದ ಸರ್ಕಾರ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸ್ಪಂದಿಸದಿರುವುದನ್ನು ಖಂಡಿಸಿ ಎಐಯುಟಿಯುಸಿ ನೇತೃತ್ವದಲ್ಲಿ ಪಟ್ಟಣದ ಬಸ್ ನಿಲ್ದಾಣ ವೃತ್ತದಲ್ಲಿ ಇಂದು ಪ್ರತಿಭಟನೆ ಮಾಡಿದರು.
ಈ ಹೋರಾಟಕ್ಕೆ ಸರ್ಕಾರ ಸ್ಪಂದಿಸದಿರುವದಕ್ಕೆ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಕಾರಣ ಕೂಡಲೇ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಎಚ್ಚರಿಸಿದರು.
ಸಂಘಟನೆಯ ಮುಖಂಡರಾದ ಲವೀನಾ, ತಿರುಪತಿ ಗೋನವಾರ, ವನಿತಾ, ಸುವರ್ಣ, ಶೋಭಾ, ಲಕ್ಷ್ಮಿ ಗಂಗಮ್ಮ, ಶೀಲವಂತಿ, ನಾಗಮ್ಮ, ವಿಜಯಲಕ್ಷ್ಮಿ ಸುಮಂಗಲಾ ಸೇರಿ ಇತರರು ಇದ್ದರು.