ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಹೇಟಿಗೆ ಏಟು ಎಂಬಂತೆ ಅಧಿಕಾರಿಗಳು ಒಬ್ಬರಿಗೊಬ್ಬರು ತಿರುಗೇಟು ಕೊಡುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಮಾಜಿ ಸಚಿವ ಅಶ್ವಥ್ ನಾರಾಯಣ್ ರವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ, ಅಭಿವೃದ್ಧಿ ಸಚಿವರಲ್ಲ ನಿರ್ನಾಮ ಸಚಿವರು ಎಂಬ ಡಾ.ಅಶ್ವತ್ಥ್ ನಾರಾಯಣ ಹೇಳಿಕೆಗೆ ಈಗ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ.
ಅವನು ಅಶ್ವತ್ಥ್ ನಾರಾಯಣ ಅಲ್ಲ ನವರಂಗಿ ನಾರಾಯಣ ಎಂದು ಕಿಡಿಕಾರಿದ್ದಾರೆ. ಅಶ್ವತ್ಥ್ ನಾರಾಯಣ ರಾಮನಗರಕ್ಕೆ ಬಂದು ಕ್ಲೀನ್ ಮಾಡ್ತೀನಿ ಎಂದು ಹೇಳಿ ಅವರ ಪಾರ್ಟಿ ಕ್ಲೀನ್ ಮಾಡಿ ಕೊಂಡು ಹೋಗಿದ್ದಾರೆ ಎಂದು ಹೇಳಿದರು.
ಅಶ್ವತ್ಥ್ ನಾರಾಯಣ ಸಚಿವರಾಗಿದ್ದಾಗ ಬೆಂಗಳೂರಿಗೆ ಏನು ಮಾಡಿದ್ದಾರೆ? ಬೆಂಗಳೂರು ನಗರದಲ್ಲಿ ಏನು ಮಾಡಿದ್ದಾರೆ ಎಂದು ನಾವು ಇನ್ನೂ ಬಿಚ್ಚಿಲ್ಲ. ಏನೇನು ಆಟ ಆಡ್ತಿದ್ದಾರೆ, ಯಾರನ್ನ ಎತ್ತಿಕಟ್ಟುತ್ತಿದ್ದಾರೆಂದು ಗೊತ್ತು. ಸ್ವಾತಂತ್ರ್ಯ ದಿನಾಚರಣೆ ನಂತರ ಎಲ್ಲದರ ಬಗ್ಗೆ ಮಾತಾಡುತ್ತೇನೆ ಎಂದು ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.