ಹಲ್ಲೆ : ಭದ್ರಾವತಿ ಶಾಸಕನ ಪುತ್ರ ಬಂಧನ

ಹಲ್ಲೆ : ಭದ್ರಾವತಿ ಶಾಸಕನ ಪುತ್ರ ಬಂಧನ

ಶಿವಮೊಗ್ಗ : ಭದ್ರಾವತಿಯಲ್ಲಿ ಫೆ.28 ರ ರಾತ್ರಿ ನಡೆದ ಘಟನೆ ಸಂಬಂಧ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ ಪುತ್ರ ಬಸವೇಶ್ ಅವರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ವೇಳೆ ಪಂದ್ಯದಲ್ಲಿ ರನ್ನರ್ ಅಪ್ ಆಗಿದ್ದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಧರ್ಮಪ್ರಸಾದ್ ತಂಡ ಜೈ ಶ್ರೀರಾಮ್ ಎಂದು ಘೋಷಣೆ ಹಾಕಿದ್ದರು. ಇದರಿಂದ ಸಿಟ್ಟಾದ ಶಾಸಕ ಸಂಗಮೇಶ್ ಪುತ್ರ, ಸಹೋದರನ ಪುತ್ರರಿಂದ ತಂಡದ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

ಇನ್ನೂ ಘಟನೆ ಸಂಬಂಧ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಘಟನೆ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದರು. ಕೊಲೆ ಬೆದರಿಕೆ, ಜಾತಿ ನಿಂದನೆ ಕೇಸ್‌ನಲ್ಲಿ ಬಸವೇಶ್ -4 ಆರೋಪಿಯಾಗಿದ್ದು, ಇಲ್ಲಿ ತನಕ ಪ್ರಕರಣ ಸಂಬಂಧ ಒಟ್ಟು 15 ಜನರನ್ನು ಪೊಲೀಸರು ಬಂದಿಸಿದ್ದಾರೆ ಎನ್ನಲಾಗಿದೆ.

Related