ಬಂಡೀಪುರ: ಅರ್ಧ ಮೃತದೇಹ ಪತ್ತೆ!

ಬಂಡೀಪುರ: ಅರ್ಧ ಮೃತದೇಹ ಪತ್ತೆ!

ಚಾಮರಾಜನಗರ: ಚಾಮರಾಜನಗರದ ಬಂಡಿಪುರದ ಸುತ್ತಮುತ್ತಲಿನಲ್ಲಿ ಇತ್ತೀಚಿಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ಪ್ರತಿನಿತ್ಯ ಸಂಕಷ್ಟದಲ್ಲಿ ಬದುಕುವ ಪರಿಸ್ಥಿತಿ ಬಂದೊದಗಿದೆ.

ಇನ್ನು ಬಡ್ಡಿಪುರದಲ್ಲಿ ವ್ಯಕ್ತಿಯೊಬ್ಬರು ಸೋಮವಾರ ನಾಪತ್ತೆಯಾಗಿದ್ದರು, ಮಂಗಳವಾರ ಅವರ ಅರ್ಧ ದೇಹವು ಪತ್ತೆಯಾಗಿದ್ದು ಕಾಡು ಪ್ರಾಣಿಗಳ ಹಾವಳಿಯಿಂದ ಸತ್ತಿರಬಹುದು ಎಂದು ತಿಳಿದುಬಂದಿದೆ.

ಹುಲಿ ದಾಳಿಯಿಂದ ಅವರು ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಅರ್ಧ ಮೃತದೇಹ ಪತ್ತೆಯಾಗಿರುವ ಬಗ್ಗೆ ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ. ಮೃತ ವ್ಯಕ್ತಿಯನ್ನು ಬಸವ (54) ಎಂದು ಗುರುತಿಸಲಾಗಿದೆ.

ಬಸವ ಅವರು ಚಾಮರಾಜನಗರ ಜಿಲ್ಲೆಯ ಆಡಿನಕಣಿವೆ ಹಾಡಿಯ ಬಳಿ ಬಿಟಿಆರ್ ವ್ಯಾಪ್ತಿಯಲ್ಲಿ ಉರುವಲು ಸಂಗ್ರಹಿಸಲು ಮತ್ತು ಜಾನುವಾರುಗಳನ್ನು ಮೇಯಿಸಲು ಹೋಗಿದ್ದಾಗ ಗುಲಿ ದಾಳಿ ಮಾಡಿರು ಸಾಧ್ಯತೆ ಇದೆ. ಬಸವ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಸಂತ್ರಸ್ತ ವ್ಯಕ್ತಿಯ ಕುಟುಂಬದವರಿಗೆ ಆರ್ಥಿಕ ಪರಿಹಾರ ನೀಡುವ ಕುರಿತು ಸರ್ಕಾರದಿಂದ ಮುಂದಿನ ನಿರ್ದೇಶನವನ್ನು ಕೋರುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಆದರೆ, ಮಾನವೀಯತೆಯ ಆಧಾರದ ಮೇಲೆ ಸಂತ್ರಸ್ತ ಕುಟುಂಬಕ್ಕೆ ಬಿಟಿಆರ್ ನಿರ್ದೇಶಕ ಪಿ ರಮೇಶ್ ಕುಮಾರ್ ಅವರು 2 ಲಕ್ಷ ರೂ ಚೆಕ್ ವಿತರಿಸಿದ್ದಾರೆ ಎಂದು ವರದಿಯಾಗಿದೆ.

 

Related