ವಿಜಯಪುರ : ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಬಸವಣ್ಣನವರ ಜನ್ಮಸ್ಥಳ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.
ನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಮೇಲೆ ಒತ್ತಡ ತರಲು ಈ ತಿಂಗಳಲ್ಲಿ ನಿಯೋಗ ಕರೆದುಕೊಂಡು ಹೋಗಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಒತ್ತಾಯಿಸಿದರು.
ಜಗತ್ತಿಗೆ ಕಾಯಕ ಸಂದೇಶ ಮತ್ತು ಮಹಿಳಾ ಸ್ವಾತಂತ್ರ್ಯವನ್ನು ಕರುಣಿಸಿದ ವಿಶ್ವಗುರು ಬಸವಣ್ಮನವರಿಗೆ ಜನ್ಮ ನೀಡಿದ ಪುಣ್ಯಭೂಮಿ, ಇದಕ್ಕೆ ಪ್ರತ್ಯೇಕ ಪ್ರಾಧಿಕಾರ ಆಗಲೇಬೇಕು. ಈ ಹಿಂದೆ ಹಲವಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಮಹದಾಯಿ ಅಂತಿಮ ತೀರ್ಪು ಬರುವ ಮುನ್ನವೇ ಮಲಪ್ರಭಾ ನದಿ ಒತ್ತುವರಿ ತೆರವುಗೊಳಿಸಿ; ಅಶೋಕ್ ಚಂದರಗಿ ಆಗ್ರಹಿಸಿದರು.
ಪಟ್ಟಣದ ಈಗ ಕೂಡಲ ಸಂಗಮ ಅಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿದೆ. ಈಗಾಗಾಲೇ ಬಸವನ ಬಾಗೇವಾಡಿ ಪಟ್ಟಣದಲ್ಲಿರುವ ಬಸವಣ್ಣನವರ ಮನೆಯನ್ನು ಸ್ವಾಧೀನಪಡಿಸಿಕೊಂಡು ಬಸವ ಸ್ಮಾರಕ ನಿರ್ಮಿಸಲಾಗಿದೆ. ಆದರೆ ಬಸವ ಭಕ್ತರ ಬೇಡಿಕೆಯಂತೆ ಅಭಿವೃದ್ಧಿಗೆ ಪ್ರಾಧಿಕಾರ ರಚಿಸಬೇಕು ಎಂದು ಅವರು ಆಗ್ರಹಿಸಿದರು.