ರೈತರ ಸಮಸ್ಯೆಗಳಿಗೆ ಸ್ಪಂದಿಸುವೆ

ರೈತರ ಸಮಸ್ಯೆಗಳಿಗೆ ಸ್ಪಂದಿಸುವೆ

ಬೆಳಗಾವಿ : ನಗರಕ್ಕೆ ಇಂದು ಆಗಮಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರನ್ನು ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಪಕ್ಷದ ಕಾರ್ಯಾಲಯದಲ್ಲಿ ಪಕ್ಷದ ಪರವಾಗಿ ಸತ್ಕರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕಾರ್ಯಕರ್ತರು ಪಕ್ಷದ ಆಸ್ತಿ ಹಾಗೂ ರೈತರು ದೇಶದ ಬೆನ್ನೆಲುಬು ನಿಮ್ಮೆಲ್ಲರ ಸಮಸ್ಯೆಗಳಿಗೆ ಸದಾ ಸ್ಪಂದಿಸುವೆ ಎಂದು ಹೇಳಿದರು.

ರೈತರ ಬಗ್ಗೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಏನಾದರೂ ತೊಂದರೆ ಇದ್ದರೆ ನಮಗೆ ತಿಳಿಸಿದರೆ ಅದಕ್ಕೆ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೆನೆ ಎಂದು ಹೇಳಿದರು.

Related