ಬಸವಕಲ್ಯಾಣ : ಈ ಹಿಂದೆ ಬಿಜೆಪಿಯಲ್ಲಿದ್ದು, ಮಾಜಿ ಶಾಸಕ ಪ್ರಕಾಶ್ ಖಂಡ್ರೆ, ಈಗ ಜೆಡಿಎಸ್ ತೊರೆದು, ಮತ್ತೆ ತಮ್ಮ ಮಾತೃ ಪಕ್ಷ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಜೆಡಿಎಸ್ಗೆ ಬಿಗ್ಶಾಕ್ ಅನ್ನು ಉಪ ಚುನಾವಣೆಯಲ್ಲಿ ನೀಡಿದ್ದಾರೆ.
ಬಾಲ್ಕಿ ಕ್ಷೇತ್ರದ ಮಾಜಿ ಶಾಸಕ ಪ್ರಕಾಶ್ ಖಂಡ್ರೆ ಅವರು ಇಂದು ಬಸವಕಲ್ಯಾಣದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.
ಈ ಮೂಲಕ ಜೆಡಿಎಸ್ ತೊರೆದು, ತಮ್ಮ ಮಾತೃ ಪಕ್ಷಕ್ಕೆ ಮತ್ತೆ ಮರಳಿರೋದು ಬಿಜೆಪಿಗೆ ಉಪ ಚುನಾವಣೆಯ ಹೊತ್ತಿನಲ್ಲೇ ಮತ್ತಷ್ಟು ಬಲ ಬಂದಂತೆ ಆಗಿದ್ದರೇ, ಜೆಡಿಎಸ್ ಗೆ ಶಾಕ್ ನೀಡಿದಂತೆ ಆಗಿದೆ.
ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜು ಬೊಮ್ಮಾಯಿ, ಮುಖ್ಯಮಂತ್ರಿ ಲಕ್ಷ್ಮಣ ಸವದಿ, ವಸತಿ ಸಚಿವ ವಿ. ಸೋಮಣ್ಣ ಉಪಸ್ಥಿತರಿದ್ದರು.