ಖಾಸಿಗಿ ಹೊಟೆಲ್ ಗೆ ಶಾಸಕರ ಕರೆದ ಬಿಜೆಪಿ..

ಖಾಸಿಗಿ ಹೊಟೆಲ್ ಗೆ ಶಾಸಕರ ಕರೆದ ಬಿಜೆಪಿ..

ಬಿಜೆಪಿಯ ಶಾಸಕರಿಗೆ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಹೋಟೆಲ್​ನಲ್ಲಿ ತಮ್ಮ ಸಾಮಾನು ಸರಂಜಾಮುಗಳೊಂದಿಗೆ ಶನಿವಾರವೇ  ಚೆಕ್ ಇನ್ ಮಾಡಿಕೊಳ್ಳುವಂತೆ ಸೂಚನೆಯನ್ನೂ ನೀಡಲಾಗಿದೆ.

. ಬೆಂಗಳೂರು: ಬಲು ಕುತೂಹಲ ಹುಟ್ಟಿಸಿರುವ ರಾಷ್ಟ್ರಪತಿ ಚುನಾವಣೆಯ ಮತದಾನ ಮುಗಿಯುವವರೆಗೆ ಕರ್ನಾಟಕ ಬಿಜೆಪಿ ಘಟಕವು ತನ್ನ ಎಲ್ಲಾ ಶಾಸಕರನ್ನು ಬೆಂಗಳೂರಿನ ಸ್ಟಾರ್ ಹೋಟೆಲ್​ಗೆ ಶಿಫ್ಟ್ ಮಾಡಲು ಯೋಜನೆ ರೂಪಿಸಿದೆ. ರಾಷ್ಟ್ರಪತಿ ಚುನಾವಣೆಗೆ  ಇದೇ ಸೋಮವಾರದಂದು  ಮತದಾನ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕದ ಬಿಜೆಪಿಯ ಎಲ್ಲ ಶಾಸಕರಿಗೂ ಬುಲಾವ್ ನೀಡಿದೆ. ಅಲ್ಲದೇ ಕರ್ನಾಟಕ ವಿಧಾನಸಭೆಯ ಮುಖ್ಯ ಸಚೇತಕ ಎಂ ಸತೀಶ್ ರೆಡ್ಡಿ ಅವರಿಂದ ಆಡಳಿತ ಪಕ್ಷ ಬಿಜೆಪಿಯ ಶಾಸಕರಿಗೆ  ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಹೋಟೆಲ್​ನಲ್ಲಿ ತಮ್ಮ ಸಾಮಾನು ಸರಂಜಾಮುಗಳೊಂದಿಗೆ ಶನಿವಾರವೇ ಚೆಕ್ ಇನ್ ಮಾಡಿಕೊಳ್ಳುವಂತೆ ಸೂಚನೆಯನ್ನೂ ನೀಡಲಾಗಿದೆ.

ರಾಷ್ಟ್ರಪತಿ ಚುನಾವಣೆಯಲ್ಲಿ ಶಾಸಕರು ಮತ್ತು ಸಂಸತ್ತಿನ ಚುನಾಯಿತ ಸದಸ್ಯರು ಮತದಾರರಾಗಿರುತ್ತಾರೆ. ಹೀಗಾಗಿ ರಾಷ್ಟ್ರಪತಿ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಭಾನುವಾರವೇ ಅಣಕು ಮತದಾನ ಮಾಡಿಸಿ ತನ್ನೆಲ್ಲ ಶಾಸಕರಿಗೆ ತರಬೇತಿ ನೀಡಲಿದೆ.

Related