ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲ್ಲಲು ಕಾಂಗ್ರೆಸ್ ನೇರ ಕಾರಣ : ಈಶ್ವರಪ್ಪ

ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲ್ಲಲು ಕಾಂಗ್ರೆಸ್ ನೇರ ಕಾರಣ : ಈಶ್ವರಪ್ಪ

ಶಿವಮೊಗ್ಗ, ಜೂ 11 :  ನಿನ್ನೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಮೂವರ ಗೆಲುವು ಸಾಧಿಸಿದ್ದಾರೆ. ಮೋದಿ ಅವರಿಗೆ ರಾಜ್ಯ ನಿಮ್ಮ ಜೊತೆ ಇದೆ ಎನ್ನುವ ಸಂದೇಶ ಈ ಫಲಿತಾಂಶದಿಂದ ರವಾನೆಯಾಗಿದೆ ಎಂದು ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ರಾಜ್ಯಸಭೆ ಚುನಾವಣಾ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮೂರನೇ ಅಭ್ಯರ್ಥಿ ಗೆಲ್ಲಲ್ಲು ಸಿದ್ದರಾಮಯ್ಯ ಪಾತ್ರ ಪ್ರಮುಖವಾಗಿದೆ. ಮೂರನೇ ಅಭ್ಯರ್ಥಿ ಗೆಲ್ಲಲು ಕಾಂಗ್ರೆಸ್ ನೇರ ಕಾರಣ. ಈ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಪಕ್ಷವನ್ನು ಯಾರೂ ನಂಬುವುದಿಲ್ಲ. ಈ ಮೂಲಕ ಕಾಂಗ್ರೆಸ್ ಪಕ್ಷ ಅಲ್ಪ ಅಸಂಖ್ಯಾತರಿಗೆ ದ್ರೋಹ ಮಾಡಿದೆ ಎಂದು ಕಾಂಗ್ರೆಸ್​ ವಿರುದ್ಧ ಲೇವಡಿ ಮಾಡಿದ್ದಾರೆ.

ಇನ್ನು ನಳೀನ್​​ ಕುಮಾರ್​ ಕಟೀಲ್​ ಅವರ ನೇತೃತ್ವದಲ್ಲಿ ನಮ್ಮ ಪಕ್ಷ ಸಂಘಟನೆಯಾಗುತ್ತಿದ್ದು, ಹಳ್ಳಿ ಹಳ್ಳಿಗಳಲ್ಲಿ ಪಕ್ಷ ಪ್ರಬಲವಾಗುತ್ತಿದೆ. ಬಿಜೆಪಿ ಕಾಂಗ್ರೆಸ್ ಜೊತೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಜನರು ಬಿಜೆಪಿಗೆ ಸ್ಪಷ್ಟ ಬಹುಮತ ನೀಡಬೇಕು ಎಂದು ಈಶ್ವರಪ್ಪ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.

 

Related