ಯತ್ನಾಳ್ ವಿರುದ್ಧ ಬಿಜೆಪಿ ಕುತಂತ್ರ!

ಯತ್ನಾಳ್ ವಿರುದ್ಧ ಬಿಜೆಪಿ ಕುತಂತ್ರ!

ಬೆಂಗಳೂರು: ರಾಜ ಬಿಜೆಪಿಯಲ್ಲಿ ಶಾಸಕ ಬಸವರಾಜ್ ಯತ್ನಾಳ್ ಅವರ ಮಾತಿನಿಂದ ಇಡಿ ಕರ್ನಾಟಕದ ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿಬಿಟ್ಟಿದೆ ಎಂದು ಬಿಜೆಪಿ ಪಕ್ಷದ ಹಿರಿಯ ನಾಯಕರುಗಳು ಶಾಸಕ ಬಸವರಾಜ್ ಯತ್ನಾಳ್ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದುಬರುತ್ತದೆ.

ಇತ್ತೀಚಿಗೆ ಬಿಜೆಪಿಯ ಶಾಸಕ ಸ್ವಪಕ್ಷ ಬಿಜೆಪಿಯ ಮೇಲೇನೆ ಹಲವಾರು ರೀತಿಯಲ್ಲಿ ಮನೆಬಂದಂತೆ ಮಾತನಾಡುತ್ತಿರುವುದರಿಂದ ಬಿಜೆಪಿ ಪಕ್ಷಕ್ಕೆ ಎಲ್ಲಿಲ್ಲದ ಡ್ಯಾಮೇಜ್ ಆಗುತ್ತಿದೆ ಹಾಗಾಗಿ ಈ ಡ್ಯಾಮೇಜ್ ಕಂಟ್ರೋಲ್ ಮಾಡಲು ರಾಜ್ಯ ಬಿಜೆಪಿಯಲ್ಲಿ ಯತ್ನಾಳ್ ವಿರುದ್ದು ಮುಂದಾಗಿದೆ ಎಂದು ತಿಳಿದುಬಂದಿದೆ.

ಇನ್ನು ಈ ಸಂಬಂಧವೇ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ಕರೆಯಲಾಗಿದ್ದು, ಹಿರಿಯ ನಾಯಕರೊಂದಿಗೆ ಚರ್ಚೆಗಳುವ ನಡೆಯುತ್ತಿರೋ ಮಾಹಿತಿ ಲಭ್ಯವಾಗಿದೆ.

ಪಕ್ಷ ಸಂಘಟನೆ, ಲೋಕಸಭೆ ಚುನಾವಣೆಗೆ ಸಿದ್ಧತೆಯ ಜೊತೆಯಲ್ಲಿ ಯತ್ನಾಳ್ ಹೇಳಿಕೆಗಳಿಂದ ಪಕ್ಷಕ್ಕಾಗುತ್ತಿರುವ ಡ್ಯಾಮೇಜ್ ಬಗ್ಗೆ ಚರ್ಚೆ ನಡೆಯುತ್ತಿದೆ. ಸಭೆಯಲ್ಲಿ ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದಗೌಡ, ಮಾಜಿ ಸಚಿವರಾದ ಶ್ರೀರಾಮುಲು, ಕೆಎಸ್ ಈಶ್ವರಪ್ಪ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ.

ಹಳೆಯ ಕೋರ್ ಕಮಿಟಿ ಸಭೆಯಿಂದಲೇ ಸಭೆ ನಡೆಯುತ್ತಿದೆ. ಪದೇ ಪದೇ ಬಿಎಸ್ ಯಡಿಯೂರಪ್ಪ ಅವರ ಕುಟುಂಬವನ್ನು ಟಾರ್ಗೆಟ್ ಮಾಡುತ್ತಿರುವ ಯತ್ನಾಳ್ ವಿರುದ್ಧ ದೂರು ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.

 

 

 

 

Related