ರಾಜ್ಯದ ಜನತೆಗೆ ಬಿಜೆಪಿ ಕೊಟ್ಟಿದ್ದು ಬರೀ ಚೊಂಬಲ್ಲ, ಖಾಲಿ ಚೊಂಬು: ಸಿಎಂ

ರಾಜ್ಯದ ಜನತೆಗೆ ಬಿಜೆಪಿ ಕೊಟ್ಟಿದ್ದು ಬರೀ ಚೊಂಬಲ್ಲ, ಖಾಲಿ ಚೊಂಬು: ಸಿಎಂ

ಬೆಂಗಳೂರು:  ಹತ್ತು ವರ್ಷ ಗಳಲ್ಲಿ ಕರ್ನಾಟಕ ರಾಜ್ಯಕ್ಕೆ ಬಿಜೆಪಿ ಪಕ್ಷ ಕೊಟ್ಟಿರುವ ಕೊಡುಗೆ ಕೇವಲ ಶೂನ್ಯ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಕರ್ನಾಟಕ ರಾಜ್ಯದ ಜನತೆಗೆ ಬರೀ ಚೊಂಬಲ್ಲ, ಖಾಲಿ ಚೊಂಬು ಜಾಹೀರಾತನ್ನು ಕಾಂಗ್ರೆಸ್ ನಾಯಕರು ಸಮರ್ಥಿಸಿಕೊಂಡಿದ್ದಾರೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದರ ಬಗ್ಗೆ ಪ್ರತಿಕ್ರಿಯೆ ನೀಡಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗೆ ಬರೀ ಚೊಂಬಲ್ಲ, ಖಾಲಿ ಚೊಂಬು ಸಿಗುತ್ತದೆ ಎಂದು ಆಕ್ರೋಶ ಹರ ಹಾಕಿದ್ದಾರೆ.

ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಜನಸಾಮಾನ್ಯರ ಖಾತೆಗೆ 15,000 ಹಾಕುತ್ತಾರೆ ಎಂದರು ಹಾಕಿದ್ದಾರೆ ?. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಶುಕ್ರವಾರ ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರದಲ್ಲಿ ತೊಡಗಿರ ಸಂದರ್ಭದಲ್ಲಿ ಮಾತನಾಡಿದ ಅವರು , 10 ವರ್ಷಗಳಲ್ಲಿ ರಾಜ್ಯಕ್ಕೆ ಏನು ಕೊಡುಗೆ ನೀಡದಿರುವ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ, ಮುಂದೆ ನಮ್ಮ ರಾಜ್ಯಕ್ಕೆ ಏನು ಒಳಿತು ಮಾಡುತ್ತದೆ ಎಂಬ ಗ್ಯಾರಂಟಿನೇ ಇಲ್ಲ ಎಂದು ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

 

Related