ಬೆಂಗಳೂರು: ಬಿಜೆಪಿ ಪಕ್ಷದವರಿಗೆ ಕನಿಷ್ಠ ಜ್ಞಾನವಿಲ್ಲದೆ ಉದ್ದೇಶಪೂರ್ವಕವಾಗಿ ಹನುಮಾನ್ ಧ್ವಜವನ್ನು ಹಾರಿಸಿ ರಾಜ್ಯದಲ್ಲಿ ಕೋಮುಗಲಭೆಯನ್ನು ಎಬ್ಬಿಸಲು ಮುಂದಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬಿಜೆಪಿಯವರ ವಿರುದ್ಧ ಗುಡುಗಿದ್ದಾರೆ.
ಇಂದು ನಗರದಲ್ಲಿ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಮನೆಯಿಂದ ಆಚೆಬಂದ ಬಳಿಕ ಅವಸರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಶಿವಕುಮಾರ್ ಬಿಜೆಪಿ ನಾಯಕರಿಗೆ ಕನಿಷ್ಟ ಜ್ಞಾನವೂ ಇಲ್ಲ, ಉದ್ದೇಶಪೂರ್ವಕವಾಗಿ ಹನುಮ ಧ್ವಜ ಪ್ರಕರಣವನ್ನು ದೊಡ್ಡದು ಮಾಡುತ್ತಿದ್ದಾರೆ ಎಂದು ಹೇಳಿದರು.