ಬಿಜೆಪಿಯವರು ಗುತ್ತಿಗೆದಾರರನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ: ಡಿಸಿಎಂ

ಬಿಜೆಪಿಯವರು ಗುತ್ತಿಗೆದಾರರನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ: ಡಿಸಿಎಂ

ಬೆಂಗಳೂರು: ಬಿಜೆಪಿ ಪಕ್ಷದವರು ರಾಜ್ಯದಲ್ಲಿ ಗುತ್ತಿಗೆದಾರರನ್ನು ಯಾವ ರೀತಿ ದುರುಪಯೋಗ ಪಡಿಸಿಕೊಂಡಿದ್ದಾರೆಂದು ನಮ್ಮತ್ರ ಸಾಕ್ಷಿ ಇದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಹೊರಗೆ ಮಾತನಾಡಿದ ಅವರು, ಇನ್ನು ಇದರ ಬಗ್ಗೆ ಎರಡು ದಿನಗಳಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡುವೆ ಎಂದು ಹೇಳಿದ್ದಾರೆ. ಕೆಲವು ಗುತ್ತಿಗೆದಾರರು ಮಾಡಿರುವ ಭ್ರಷ್ಟಾಚಾರದ ಆರೋಪದ ಬಗ್ಗೆ ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸುವುದಾಗಿ ಹೇಳಿದರು.

ಕಮಲದವರು ಬೆಂಗಳೂರಿನಲ್ಲಿ ಏನು ಮಾಡಿದ್ದಾರೆ ಎಂಬುದನ್ನು ನಾವು ಇನ್ನೂ ಬಹಿರಂಗಪಡಿಸಿಲ್ಲ. ಎಷ್ಟು ಕಾಮಗಾರಿಗಳು ನಡೆದಿವೆ, ಎಷ್ಟು ಬಾಕಿ ಇವೆ ಎಂಬ ಎಲ್ಲ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸುತ್ತೇನೆ. ನಾನು ಯಾರಿಗೂ ಗುತ್ತಿಗೆ ನೀಡಿಲ್ಲ. ಬಿಜೆಪಿ ಆಡಳಿತದಿಂದ ಬಾಕಿ ಉಳಿದಿರುವ ಬಿಲ್‌ಗಳನ್ನು ತೆರವುಗೊಳಿಸಲು ಕೆಲವರು ನನ್ನನ್ನು ಭೇಟಿಯಾದರು. ಕಾಮಗಾರಿಯನ್ನು ಪರಿಶೀಲಿಸಲು ನಿರ್ಧರಿಸಿದ್ದೇವೆ. ಅವರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರೆ, ನಾವು ಬಿಲ್‌ಗಳನ್ನು ಬಿಡುಗಡೆ ಮಾಡುತ್ತೇವೆ ಎದರು.

 

Related