ನೇಹಾ ಹತ್ಯೆ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟನೆ

ನೇಹಾ ಹತ್ಯೆ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟನೆ

ಬೆಂಗಳೂರು: ವಿದ್ಯಾರ್ಥಿ ನೇಹಾ ಹಿರೇಮಠ್ ಹತ್ಯೆಯನ್ನು ಖಂಡಿಸಿ ನಾಳೆ (ಸೋಮವಾರ ಏಪ್ರಿಲ್ 22) ರಂದು ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆಯನ್ನು ಕೈಗೊಳ್ಳಲಿದೆ ಎಂದು ಬಿಜೆಪಿಯ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಕರೆ ನೀಡಿದ್ದಾರೆ.
ಈ ಕುರಿತು ಬಿ ವೈ ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣ ಟ್ವೀಟ್ ಮಾಡುವ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ನೇಹಾ ಹತ್ಯೆ ರಾಜ್ಯದಲ್ಲಿ ದಿನಕ್ಕೊಂದು ತಿರುವ ಪಡೆಯುತ್ತಿದ್ದು ಸತ್ಯ ಅಸತ್ಯಗಳ ಬಗ್ಗೆ ಚರ್ಚೆಯಾಗಬೇಕೆಂದು ಈಗಾಗಲೇ ರಾಜ್ಯದಾದ್ಯಂತ ಹಲವು ಸಂಘಟನೆಗಳು ಪ್ರತಿಭಟನೆ ಮಾಡಿದ್ದವು. ಇನ್ನು ನಾಳೆ ಬಿಜೆಪಿ ಪಕ್ಷ ರಾಜದಾದ್ಯಂತ ನೇಹಾ ಹತ್ಯೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಮುಂದಾಗಿದೆ.

Related