ಬೆಂಗಳೂರು: ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ ನಡೆದ ಗಲಭೆ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಆರ್ಟಿ ನಗರದಲ್ಲಿರುವ ಗೃಹ ಸಚಿವರಾದ ಬಸವರಾಜ ಬೊಮ್ಮಯಿ ಅವರ ಮನೆಗೆ ಭೇಟಿ ನೀಡಿದರು. ಗಲಭೆ ವೇಳೆ ಬೆಂಕಿಗಾಹುತಿಯಾಗಿದ್ದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಅವರ ಮನೆಗೂ ತೆರಳಿ ಸಾ ಂತ್ವನ ಹೇಳಿದರು.
ಈ ವೇಳೆ ಬಿಜೆಪಿ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ, ರಾಜ್ಯ ಉಪಾಧ್ಯಕ್ಷರು ನಿರ್ಮಲಾ ಕುಮಾರ್ ಸ್ಮರಾಣಾ, ರಾಜ್ಯ ಪ್ರದಾನಕಾರ್ಯದರ್ಶಿ ಸಿದ್ದರಾಜು, ರಾಜ್ಯಕಾರ್ಯದರ್ಶಿ ಹಾಗೂ ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ , ಶಾಸಕ ಅರವಿಂದ ಲಿಂಬಾವಳಿ, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಬಿ. ನಾರಾಯಣ ಉಪಸ್ಥಿತರಿದ್ದರು.