ರಾಜ್ಯದಲ್ಲಿ ಹೆಚ್ಚಾಯ್ತು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದು..!

ರಾಜ್ಯದಲ್ಲಿ ಹೆಚ್ಚಾಯ್ತು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದು..!

ಮೈಸೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ ರಾಜಕೀಯದಲ್ಲಿ ಪಕ್ಷದಿಂದ ಪಕ್ಷಕ್ಕೆ ಹಾರುವುದು ಹೆಚ್ಚಾಗಿ ಕಂಡುಬರುತ್ತದೆ.

ಇಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬಿಜೆಪಿ ಮಾಜಿ ಅಧ್ಯಕ್ಷರಾದ ಹೆಚ್ವಿ ರಾಜೀವ್ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.

ಇಂದು ಮೈಸೂರಿನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಬಿಜೆಪಿಯ H. V. Rajeev ಅವರು ತಮ್ಮ ಅಪಾರ ಬೆಂಬಲಿಗರ ಜತೆ ಮತ್ತು ಮಾಜಿ ಮೇಯರ್ R ಲಿಂಗಪ್ಪ ಹಾಗೂ K. R ಕ್ಷೇತ್ರದ ಜೆಡಿಎಸ್ ಮುಖಂಡ ಕೆ. ವಿ ಮಲ್ಲೇಶ್ ಅವರು ತಮ್ಮ ಅಪಾರ ಬೆಂಬಲಿಗರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವರಾಗಿರುವಂತಹ ದಿನೇಶ್ ಗುಂಡೂರಾವ್ ಮತ್ತು ಯತೀಂದ್ರ ಇನ್ನಿತರ ಕಾಂಗ್ರೆಸ್ ಮುಖಂಡರುಗಳು ಈ ಸಂದರ್ಭದಲ್ಲಿ ಭಾಗಿಯಾಗಿದ್ದರು.

Related