ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು: ವಿಶ್ವಾಸ

ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು: ವಿಶ್ವಾಸ

ಬೆಳಗಾವಿ : ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷ ಎಲ್ಲವನ್ನೂ ಗಮನಿಸಿ ಯೋಚನೆ ಮಾಡಿಕೊಂಡು ಶಿರಾ ಉಪಚುನಾವಣೆಗೆ ಅಭ್ಯರ್ಥಿ ಘೋಷಣೆ ಮಾಡಲಿದ್ದು, ನಾಲ್ಕೈದು ಹೆಸರುಗಳು ಕೇಳಿ ಬರುತ್ತಿವೆ. ಪರಿಶೀಲನೆ ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಶಿರಾ ಉಪಚುನಾವಣೆಗೆ ಆಯ್ಕೆ ಮಾಡುತ್ತೇವೆ ಎಂದರು.

ಇನ್ನು ಕಾಂಗ್ರೆಸ್ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ. ರೈತರನ್ನು ಎತ್ತಿಕಟ್ಟಿ ರಾಷ್ಟ್ರದಲ್ಲಿ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ರಾಜಕಾರಣಕ್ಕೋಸ್ಕರ ದ್ವೇಷ ಹುಟ್ಟಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಕಿಡಿಕಾರಿದರು.

Related