ಕಲಬುರಗಿ : ಆಳಂದ ತಾಲೂಕಿನ ಭೂಸನೂರ ಗ್ರಾಮದಲ್ಲಿ ಹೊಟ್ಟೆಗೆ ಕಲ್ಲು ಕಟ್ಟಿಕೊಂಡು ಅಣ್ಣ-ತಮ್ಮ ಇಬ್ಬರೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು. ಈ ದುರ್ಘಟನೆ ನಡೆದಿದೆ.
ಸಹೋದರರಾದ ಸುನೀಲ್ (17) ಮತ್ತು ಶೇಖರ್(12) ಮೃತಪಟ್ಟಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮನೆಯಲ್ಲಿ ತಂದೆ-ತಾಯಿಯೊಂದಿಗೆ ಜಗಳ ಮಾಡಿಕೊಂಡಿದ್ದ ಸಹೋದರರು ಬಳಿಕ ಕೃಷಿ ಜಮೀನಿನ ಬಳಿ ಬಳಿ ಬಂದು ಹೊಟ್ಟೆಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿದ್ದಾರೆ. ಇವರಿಬ್ಬರಿಗೂ ಈಜು ಬರುತಿತ್ತು. ಹಾಗಾಗಿ ಕಲ್ಲು ಕಟ್ಟಿಕೊಂಡು ಸಾವಿನ ಮನೆಯ ಕದ ತಟ್ಟಿದ್ದಾರೆ.
ರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.