ಬಿ.ಎಸ್ ಆನಂದಸಿಂಗ್ ಕಟ್ಟುನಿಟ್ಟಿನ ಸೂಚನೆ

ಬಿ.ಎಸ್ ಆನಂದಸಿಂಗ್ ಕಟ್ಟುನಿಟ್ಟಿನ ಸೂಚನೆ

ಬಳ್ಳಾರಿ : ಸಾಂಸ್ಥಿಕ ಕ್ವಾರಂಟೈನ್‌ಗಳಲ್ಲಿ ಗುಣಮಟ್ಟದ ಆಹಾರ, ಸ್ವಚ್ಛತೆ ಬಗ್ಗೆ ದೂರುಗಳು ಬರುತ್ತಿದ್ದು, ಗುಣಮಟ್ಟದ ಆಹಾರ ಮತ್ತು ಸಮರ್ಪಕ ಸ್ವಚ್ಛತೆ ಒದಗಿಸುವಂತೆ ಸಚಿವ ಬಿ.ಎಸ್.ಆನಂದಸಿಂಗ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೋನಾ ಆರೋಗ್ಯ ಸೇವೆ ಸಲ್ಲಿಸುತ್ತಿರುವ 43 ಸರಕಾರಿ ಹಾಗೂ 4 ಜನ ಖಾಸಗಿ ವೈದ್ಯರು, ಸ್ಟಾಪ್ ನರ್ಸ್, ಲ್ಯಾಬ್ ಟೆಕ್ನಿಷಿಯನ್, ಗ್ರೂಪ್ ಡಿ. ಸೇರಿ 108 ಜನ ಆರೋಗ್ಯ ಸೇವೆ ಸಲ್ಲಿಸುತ್ತಿರುವವರಿಗೆ ಸೋಂಕು ದೃಢಪಟ್ಟಿರುವುದು ಆತಂಕ. ಜಿಲ್ಲೆಯಲ್ಲಿ ಇದುವರೆಗೆ 1,342 ಪ್ರಕರಣಗಳು ದೃಢಪಟ್ಟಿದ್ದು, 8,988 ಪ್ರಥಮ ಸಂಪರ್ಕಿತರು, 3,472 ಜನರು ದ್ವಿತೀಯ ಸಂಪರ್ಕಿತರಿದ್ದಾರೆ ಎಂದರು.

Related