`ಬುದ್ಧನ ಮೂರ್ತಿ ಧ್ವಂಸಗೊಳಿಸಿದ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ’

`ಬುದ್ಧನ ಮೂರ್ತಿ ಧ್ವಂಸಗೊಳಿಸಿದ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ’

ಶಹಾಪುರ: ಸುರಪೂರ ಗೋಲ್ಡನ್ ಕೇವ್ ಬುದ್ಧ ವಿಹಾರದಲ್ಲಿ ಬುದ್ಧನ ಮೂರ್ತಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದು ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಜಿಲ್ಲಾ ಸಂಚಾಲಕರಾದ ಶರಣು ದೋರನಹಳ್ಳಿ ಗುರುವಾರ ಒತ್ತಾಯಿಸಿದ್ದಾರೆ.

ನಗರದ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆಯ ಮೂಲಕ ತಹಶೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಮಾತಾನಾಡಿದ ಅವರು ಮೂರ್ತಿ ಧ್ವಂಸಗೊಳಿಸಿದ್ದರಿಂದ ಬುದ್ಧನ ಅನುಯಾಯಿಗಳ ಆತ್ಮಗೌರವಕ್ಕೆ ದಕ್ಕೆಯಾಗಿದೆ. ಇಡೀ ವಿಶ್ವಕ್ಕೆ ಶಾಂತಿಯನ್ನು ಸಾರಿದ ಗೌತಮ ಬುದ್ಧರಿಗೆ ರಕ್ಷಣೆ ಇಲ್ಲದಂತಾಗಿದೆ. ತಪ್ಪಿತಸ್ಥರು ಯಾರೇ ಆಗಿರಲಿ ಪತ್ತೆ ಹಚ್ಚಿ ಶಿಕ್ಷಸಬೇಕು. ಸರ್ಕಾರದ ವತಿಯಿಂದ ಬುದ್ಧನ ಮೂರ್ತಿಯನ್ನು ಸ್ಥಾಪನೆ ಮಾಡಬೇಕು. ಬುದ್ಧ ವಿಹಾರದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು ರಾತ್ರೀ ವೇಳೆ ಪೊಲೀಸ್ ಗಸ್ತು ಮಾಡಬೇಕು ಎಂದು ಆಗ್ರಹಿಸಿದರು.

Related