ಬಜೆಟ್ ನಲ್ಲಿ ಬಾದಾಮಿಗೆ ಅನುದಾನ

ಬಜೆಟ್ ನಲ್ಲಿ ಬಾದಾಮಿಗೆ ಅನುದಾನ

ಬೆಂಗಳೂರು , ಫೆ. 20 : ಬಾದಾಮಿಗೆ ಅನುದಾನ ನೀಡುವಂತೆ ಕೋರಿ ಬಾದಾಮಿ ಕ್ಷೇತ್ರದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
ಗ್ರಾಮೀಣ ಅಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
ಬಜೆಟ್ ನಲ್ಲಿ ಬಾದಾಮಿಗೆ ಅನುದಾನ ನೀಡುವಂತೆ ಕೋರಿ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆಯುವುದರ ಮೂಲಕ ಮನವಿ ಮಾಡಿಕೊಂಡಿದ್ದರು. ಇದೀಗ ಬಾದಾಮಿಗೆ ಒಟ್ಟು 51 ಕೋಟಿ ರೂ. ಅನುದಾನ ನೀಡುವಂತೆ ಕೋರಿ , ಗ್ರಾಮೀಣಾಭಿವೃದ್ಧಿ, ಪಂ.ರಾಜ್ ಇಲಾಖೆಯಿಂದ ಅನುದಾನಕ್ಕೆ ಮನವಿ ಮಾಡುವಂತೆ ತಿಳಿಸಿ ಸಿದ್ದರಾಮಯ್ಯ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

Related