ನೆರೆ ರಾಜ್ಯಕ್ಕೆ ಬಸ್ ಸಂಚಾರ ಆರಂಭ?

ನೆರೆ ರಾಜ್ಯಕ್ಕೆ ಬಸ್ ಸಂಚಾರ ಆರಂಭ?

ಕಲಬುರಗಿ : ರಾಜ್ಯ ಸರ್ಕಾರವು ಅಂತರರಾಜ್ಯ ಪ್ರಯಾಣಿಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರದಲ್ಲೇ ನೆರೆ ರಾಜ್ಯಗಳಿಗೆ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳವುದಾಗಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ನೆರೆಯ ರಾಜ್ಯಗಳಿಗೆ ಪತ್ರ ಬರೆಯಲಾಗಿದೆ. ಈಗ ನೆರೆಯ ಆಂಧ್ರಪ್ರದೇಶದ ಒಪ್ಪಿಗೆ ನೀಡಿದೆ. ಹೀಗಾಗಿ ಎರಡು ಮೂರು ದಿನದೊಳಗೆ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವುದು, ಎಂದು ಅಧಿಕಾರಿಗಳೊಂದಿಗೆ ಚರ್ಚಿಸಿ ಬಸ್ ಸಂಚಾರ ಶುರು ಮಾಡಲಾಗುವುದು ಎಂದು ಮಾಹಿತಿ ನೀಡಿದರು.

Related